ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಪ್ರದೇಶದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನವಿದೆ. ಸಚಿವರಾದ ಶರಣಬಸಪ್ಪ ದರ್ಶನಾಪುರ, ಶಿವರಾಜ ತಂಗಡಗಿ, ಎನ್.ಎಸ್.ಬೋಸರಾಜು ಅವರು ಕೂಡ ಸಂಘಟಿತವಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಥ್ ನೀಡಿವೆ’ ಎಂದರು.