<p><strong>ಲಿಂಗಸುಗೂರು</strong>: ‘ಗೋಶಾಲೆಗಳನ್ನು ಆರಂಭಿಸಲು ಉತ್ತೇಜನ ನೀಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಗಳು ಪರೋಕ್ಷವಾಗಿ ಜಾನುವಾರು ಮಾಂಸ ಮಾರಾಟದ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಸಿವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.</p>.<p>ಸೋಮವಾರ ಲಿಂಗಸುಗೂರ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ರೈತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ರಾಷ್ಟ್ರದಲ್ಲಿ ವಿದೇಶಗಳಿಗೆ ಜಾನುವಾರು (ಬೀಫ್) ಮಾಂಸ ರಫ್ತು ಮಾಡುವ 17 ಏಜೆನ್ಸಿಗಳಿವೆ. ಆ ಪೈಕಿ ಒಂದು ಮಾತ್ರ ಮುಸ್ಲಿಂ ವ್ಯಕ್ತಿಯ ಮಾಲಿಕತ್ವದ ಏಜೆನ್ಸಿಯಿದೆ. ಉಳಿದಂತೆ 16 ಏಜೆನ್ಸಿಗಳು ಜೈನ ಮತ್ತು ಬ್ರಾಹ್ಮಣ ಸಮುದಾಯದ ಮಾಲೀಕತ್ವದಲ್ಲಿವೆ. ಎಲ್ಲ ಏಜೆನ್ಸಿಗಳು ಕಾಂಗ್ರೆಸ್, ಬಿಜೆಪಿ ಕೃಪಾಕಟಾಕ್ಷದಲ್ಲಿ ಕಾರ್ಯನಿರ್ವಹಿಸುತ್ತಿವೆ’ ಎಂದರು.</p>.<p>‘ರಾಜ್ಯದಲ್ಲಿ ಗೋಹತ್ಯೆ ನಿಯಂತ್ರಣ ಕಾಯ್ದೆ ಬದಲು, ಜಾನುವಾರುಗಳ ಮಾರಾಟ ನಿಯಂತ್ರಣ ಕಾಯ್ದೆ ಜಾರಿಗೆ ತರಲು ಯತ್ನ ನಡೆದಿದೆ. ಈ ನೆಪದಲ್ಲಿ ಜಾನುವಾರು ಸಾಕಿದ ರೈತರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಹುನ್ನಾರ ನಡೆಸಲಾಗುತ್ತಿದೆ. ಸರ್ಕಾರ 15 ದಿನದೊಳಗೆ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಬೇಕು. ಇಲ್ಲದೆ ಹೋದಲ್ಲಿ ರಾಜ್ಯವ್ಯಾಪಿ ಹೋರಾಟ ಚುರುಕುಗೊಳಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ‘ಗೋಶಾಲೆಗಳನ್ನು ಆರಂಭಿಸಲು ಉತ್ತೇಜನ ನೀಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಗಳು ಪರೋಕ್ಷವಾಗಿ ಜಾನುವಾರು ಮಾಂಸ ಮಾರಾಟದ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಸಿವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.</p>.<p>ಸೋಮವಾರ ಲಿಂಗಸುಗೂರ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ರೈತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ರಾಷ್ಟ್ರದಲ್ಲಿ ವಿದೇಶಗಳಿಗೆ ಜಾನುವಾರು (ಬೀಫ್) ಮಾಂಸ ರಫ್ತು ಮಾಡುವ 17 ಏಜೆನ್ಸಿಗಳಿವೆ. ಆ ಪೈಕಿ ಒಂದು ಮಾತ್ರ ಮುಸ್ಲಿಂ ವ್ಯಕ್ತಿಯ ಮಾಲಿಕತ್ವದ ಏಜೆನ್ಸಿಯಿದೆ. ಉಳಿದಂತೆ 16 ಏಜೆನ್ಸಿಗಳು ಜೈನ ಮತ್ತು ಬ್ರಾಹ್ಮಣ ಸಮುದಾಯದ ಮಾಲೀಕತ್ವದಲ್ಲಿವೆ. ಎಲ್ಲ ಏಜೆನ್ಸಿಗಳು ಕಾಂಗ್ರೆಸ್, ಬಿಜೆಪಿ ಕೃಪಾಕಟಾಕ್ಷದಲ್ಲಿ ಕಾರ್ಯನಿರ್ವಹಿಸುತ್ತಿವೆ’ ಎಂದರು.</p>.<p>‘ರಾಜ್ಯದಲ್ಲಿ ಗೋಹತ್ಯೆ ನಿಯಂತ್ರಣ ಕಾಯ್ದೆ ಬದಲು, ಜಾನುವಾರುಗಳ ಮಾರಾಟ ನಿಯಂತ್ರಣ ಕಾಯ್ದೆ ಜಾರಿಗೆ ತರಲು ಯತ್ನ ನಡೆದಿದೆ. ಈ ನೆಪದಲ್ಲಿ ಜಾನುವಾರು ಸಾಕಿದ ರೈತರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಹುನ್ನಾರ ನಡೆಸಲಾಗುತ್ತಿದೆ. ಸರ್ಕಾರ 15 ದಿನದೊಳಗೆ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಬೇಕು. ಇಲ್ಲದೆ ಹೋದಲ್ಲಿ ರಾಜ್ಯವ್ಯಾಪಿ ಹೋರಾಟ ಚುರುಕುಗೊಳಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>