ಕಾಂಗ್ರೆಸ್ ಪಕ್ಷದ ದೇವದುರ್ಗ ಬ್ಲಾಕ್ ಘಟಕದ ಅಧ್ಯಕ್ಷ ಅಬ್ದುಲ್ ಅಜೀಜ್ಸಾಬ ಅವರು ಪತ್ರಿಕೆ ಹೇಳಿಕೆ ನೀಡಿದ್ದು, ಈಚೆಗೆ ಗುಳೆ ಹೋದವರು ವಾಪಸ್ ತಾಲ್ಲೂಕಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರಿಗೆ ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತೆಗಾಗಿ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ತಾಲ್ಲೂಕು ಆಡಳಿತ ಅನ್ನದಾಸೋಹ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿತ್ತು. ಆದರೆ ಬಿಜೆಪಿಯ ಕೆಲವು ಮುಖಂಡರು ಶಾಸಕ ಕೆ.ಶಿವನಗೌಡ ನಾಯಕ ಅಭಿಮಾನಿಗಳ ಬಳಗ ಎಂದು ಹೇಳಿಕೊಂಡು ತಾಲ್ಲೂಕು ಆಡಳಿತ ಮಾಡಿಸಿದ್ದ ಆಹಾರ ಪದಾರ್ಥವನ್ನು ಜನರಿಗೆ ಬಡಿಸುವ ಮೂಲಕ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ ಎಂದು ದೂರಿದ್ದಾರೆ.