ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಜಾರಕಿಹೊಳಿ ಭಾವಚಿತ್ರ ದಹಿಸಿ ಪ್ರತಿಭಟನೆ

Last Updated 9 ನವೆಂಬರ್ 2022, 13:18 IST
ಅಕ್ಷರ ಗಾತ್ರ

ರಾಯಚೂರು: ಹಿಂದೂ ವಿರೋಧಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸತೀಶ ಜಾರಕಿಹೊಳಿ ಅವರ ಭಾವಚಿತ್ರವನ್ನು ದಹಿಸಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತರು ಸತೀಶ ಜಾರಕಿಹೊಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೋರುವಂತೆ ಒತ್ತಾಯಿಸಿದರು.

ಹಿಂದು ವಿರೋಧಿ ಹೇಳಿಕೆ ನೀಡುವ ಮೂಲಕ ಸತೀಶ ಜಾರಕಿಹೊಳಿ ಅವರು 80 ಕೋಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಹಿಂದೂ ಧರ್ಮದ ಬಗ್ಗೆ ಅರ್ಧಮರ್ಧ ತಿಳಿದುಕೊಂಡಿದ್ದಾರೆ. ಹಿಂದುಗಳ ಬಗ್ಗೆ ಮತ್ತೊಮ್ಮೆ ಇಂತಹ ಹೇಳಿಕೆ ನೀಡಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ್ ಯಾದವ್ ಎಚ್ಚಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಬಿ.ಗೋವಿಂದ, ರಾಜಕುಮಾರ, ಕೆ.ಎಂ.ಪಾಟೀಲ್, ಶೇಖರರೆಡ್ಡಿ, ಕಡಗೊಳ ಅಂಜಿನೆಯ್ಯ,ಎ.ಚಂದ್ರಶೇಖರ, ಬಂಡೆಶ ವಲ್ಕಂದಿನ್ನಿ, ಗುಡಿಸಿ ನರಸರೆಡ್ಡಿ, ಸಂಜೀವರೆಡ್ಡಿ, ಉಟ್ಕೂರು ರಾಘವೇಂದ್ರ, ಮಹೇಂದ್ರರೆಡ್ಡಿ ಡಾ.ನಾಗರಾಜ ಬಾಲ್ಕಿ, ಶಶಿರಾಜ್ ಮಸ್ಕಿ, ಈ ಶಶಿರಾಜ, ಸುಲೋಚನಾ, ವಾಣಿ, ಗಂಗೂಬಾಯಿ, ಸುಷ್ಮಾ, ನಾಗವೇಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT