<p><strong>ಶಕ್ತಿನಗರ: </strong>ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್ಟಿಪಿಎಸ್) 8ನೇ ವಿದ್ಯುತ್ ಘಟಕದ ಏರಿಯಾದಲ್ಲಿ ಗುರುವಾರ ಕ್ಯಾಪಿಸಿಟಿ ವಿದ್ಯುತ್ ಪರಿವರ್ತಕದಲ್ಲಿ ಸ್ಪೋಟ ಕಾಣಿಸಿಕೊಂಡಿತು.</p>.<p>ಒಂದು ವರ್ಷದಿಂದ ತಾಂತ್ರಿಕ ಸಮಸ್ಯೆಯಿಂದಾಗಿ 250 ಮೆಗಾವಾಟ್ ಸಾಮರ್ಥ್ಯದ ಎಂಟನೇ ಘಟಕದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ದುರಸ್ತಿ ಕಾರ್ಯ ಕೈಗೆತ್ತಿಕೊಂಡು, ಎರಡು ದಿನಗಳ ಹಿಂದೆ ಉತ್ಪಾದನೆ ಆರಂಭಿಸಿದರು.</p>.<p>ಗುರುವಾರ ಬೆಳಿಗ್ಗೆ 9.30ಕ್ಕೆ ವಿದ್ಯುತ್ ಘಟಕದ ಕ್ಯಾಪಿಸಿಟಿ ವಿದ್ಯುತ್ ಪರಿವರ್ತಕದಲ್ಲಿ ಹೆಚ್ಚಿನ ಲೋಡ್ ಬಿದ್ದ ಕಾರಣ, ಸ್ಪೋಟಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.</p>.<p>ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ವಿದ್ಯುತ್ ಪರಿವರ್ತಕದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದರು. ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ವೆಂಕಟಚಲಾಪತಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಸ್ಪೋಟದಿಂದ ಬೆಂಕಿಯಲ್ಲಿ ಸುಟ್ಟು ಹೋದ ವಿದ್ಯುತ್ ಪರಿವರ್ತಕ ಬದಲಾಯಿಸಿ, ಬೇರೆ ವಿದ್ಯುತ್ ಪರಿವರ್ತಕ ಅಳವಡಿಸಿ, ತಕ್ಷಣವೇ ದುರಸ್ತಿ ಕಾರ್ಯ ಕೈಗೆತ್ತಿಕೊಂಡು ಉತ್ಪಾದನೆಗೆ ಅನುವು ಮಾಡಿಕೊಡಬೇಕು ಎಂದು ಕೆ.ವಿ.ವೆಂಕಟಚಲಾಪತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸದ್ಯ 8ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಂಡಿದ್ದು ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ: </strong>ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್ಟಿಪಿಎಸ್) 8ನೇ ವಿದ್ಯುತ್ ಘಟಕದ ಏರಿಯಾದಲ್ಲಿ ಗುರುವಾರ ಕ್ಯಾಪಿಸಿಟಿ ವಿದ್ಯುತ್ ಪರಿವರ್ತಕದಲ್ಲಿ ಸ್ಪೋಟ ಕಾಣಿಸಿಕೊಂಡಿತು.</p>.<p>ಒಂದು ವರ್ಷದಿಂದ ತಾಂತ್ರಿಕ ಸಮಸ್ಯೆಯಿಂದಾಗಿ 250 ಮೆಗಾವಾಟ್ ಸಾಮರ್ಥ್ಯದ ಎಂಟನೇ ಘಟಕದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ದುರಸ್ತಿ ಕಾರ್ಯ ಕೈಗೆತ್ತಿಕೊಂಡು, ಎರಡು ದಿನಗಳ ಹಿಂದೆ ಉತ್ಪಾದನೆ ಆರಂಭಿಸಿದರು.</p>.<p>ಗುರುವಾರ ಬೆಳಿಗ್ಗೆ 9.30ಕ್ಕೆ ವಿದ್ಯುತ್ ಘಟಕದ ಕ್ಯಾಪಿಸಿಟಿ ವಿದ್ಯುತ್ ಪರಿವರ್ತಕದಲ್ಲಿ ಹೆಚ್ಚಿನ ಲೋಡ್ ಬಿದ್ದ ಕಾರಣ, ಸ್ಪೋಟಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.</p>.<p>ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ವಿದ್ಯುತ್ ಪರಿವರ್ತಕದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದರು. ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ವೆಂಕಟಚಲಾಪತಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಸ್ಪೋಟದಿಂದ ಬೆಂಕಿಯಲ್ಲಿ ಸುಟ್ಟು ಹೋದ ವಿದ್ಯುತ್ ಪರಿವರ್ತಕ ಬದಲಾಯಿಸಿ, ಬೇರೆ ವಿದ್ಯುತ್ ಪರಿವರ್ತಕ ಅಳವಡಿಸಿ, ತಕ್ಷಣವೇ ದುರಸ್ತಿ ಕಾರ್ಯ ಕೈಗೆತ್ತಿಕೊಂಡು ಉತ್ಪಾದನೆಗೆ ಅನುವು ಮಾಡಿಕೊಡಬೇಕು ಎಂದು ಕೆ.ವಿ.ವೆಂಕಟಚಲಾಪತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸದ್ಯ 8ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಂಡಿದ್ದು ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>