<p><strong>ರಾಯಚೂರು: ‘</strong>ಎನ್.ಎಸ್.ಬೋಸರಾಜು ಕಾಂಗ್ರೆಸ್ ಪಕ್ಷದ ಸಂಘಟನಾ ಶಕ್ತಿಯಾಗಿದ್ದಾರೆ. ಸುಧೀರ್ಘ ರಾಜಕೀಯ ಜೀವನದಲ್ಲಿ ಎಲ್ಲ ಮುಖಂಡರೊಂದಿಗೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದ್ದಾರೆ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಬಣ್ಣಿಸಿದರು.</p>.<p>ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಸಣ್ಣ ನೀರಾವರಿ ಸಚಿವ ಎನ್. ಎಸ್.ಬೋಸರಾಜು ಅವರ 79ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಚೈತನ್ಯ ಸಾಗರ’ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬೋಸರಾಜು ನನ್ನ ತಂದೆ ಕೆ.ಎಚ್.ಪಾಟೀಲ ಅವರೊಂದಿಗೆ ಆತ್ಮೀಯರಾಗಿದ್ದರು. 1972ರಿಂದ ಬೋಸರಾಜ ಅವರೊಂದಿಗೆ ಒಡನಾಟ ಇದೆ. ನೀರಾವರಿಗೆ ಸಂಬಂಧಪಟ್ಟ ವಿಷಯಗಳನ್ನು ಅವರಿಂದ ಅರಿತುಕೊಂಡೆ. ಅವರು ಗುರುವಾಗಿ ನನಗೆ ತಿಳಿವಳಿಕೆ ನೀಡಿದ್ದಾರೆ’ ಎಂದರು.</p>.<p>‘ತೆಲಂಗಾಣದ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಅವರ ತ್ಯಾಗ, ಸಾಧನೆ ಗುರುತಿಸಿ ಪಕ್ಷ ಅವರಿಗೆ ಮಹತ್ವದ ಸ್ಥಾನ ನೀಡಿದೆ. ಚೈತನ್ಯ ಸಾಗರ ಗ್ರಂಥದಲ್ಲಿ ಯುವಜನರಿಗೆ ನಾಯಕತ್ವದ ಸ್ಪೂರ್ತಿ ತುಂಬವ ಅಂಶಗಳು ಇವೆ’ ಎಂದು ತಿಳಿಸಿದರು.</p>.<p class="Briefhead">‘ಕಾಂಗ್ರೆಸ್ ಸರ್ಕಾರ ರಚನೆಗೆ ಪ್ರೇರಣೆ’</p>.<p>‘ಕಾಂಗ್ರೆಸ್ಗೆ ನಿಷ್ಠರಾಗಿರುವ ಎನ್.ಎಸ್.ಬೋಸರಾಜು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಪ್ರೇರಣೆಯಾಗಿದ್ದಾರೆ’ ಎಂದು ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಹೇಳಿದರು.</p>.<p>‘50 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದು, ಪಕ್ಷದ ಸಲಹೆಗಾರರಾಗಿ, ಸಂಘಟನಾ ಶಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅವರ ಪಾತ್ರವೂ ಇದೆ. ತೆಲಂಗಾಣ ಹಾಗೂ ಕರ್ನಾಟಕ ಒಗ್ಗೂಡಿ ಸಾಗಲಿವೆ. ಬೋಸರಾಜು ಜನ್ಮದಿನದ ಅಂಗವಾಗಿ ಗ್ರಂಥ ಹೊರ ತಂದಿರುವುದು ಜನರ ಅಭಿಮಾನಕ್ಕೆ ಸಾಕ್ಷಿಯಾಗಿದೆ’ ಎಂದು ಬಣ್ಣಿಸಿದರು.</p>.<p class="Briefhead">‘ಬೋಸರಾಜು ರಾಷ್ಟ್ರದ ಆಸ್ತಿ’</p>.<p>‘ಜಟಿಲ ಹಾಗೂ ವಿಷಮ ಪರಿಸ್ಥಿತಿಯಲ್ಲೂ ತಾಳ್ಮೆ ವಹಿಸುವ ಅವರ ಗುಣವೇ ಅವರನ್ನು ಎತ್ತರಕ್ಕೆ ಬೆಳೆಯುವಂತೆ ಮಾಡಿದೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.</p>.<p>‘ಬೋಸರಾಜು ಅವರು ಎಲ್ಲರ ವಿಶ್ವಾಸ ಗಳಿಸಿದ್ದಾರೆ. ನನಗೂ ರಾಜಕೀಯ ಮಾರ್ಗದರ್ಶನ ಮಾಡಿದ್ದಾರೆ. ಅವರ ವ್ಯಕ್ತಿತ್ವವೇ ದಾರಿ ದೀಪವಾಗಿದೆ. ಅವರು ಪಕ್ಷಕ್ಕೆ ಅಷ್ಟೇ ಅಲ್ಲ; ರಾಜ್ಯ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: ‘</strong>ಎನ್.ಎಸ್.ಬೋಸರಾಜು ಕಾಂಗ್ರೆಸ್ ಪಕ್ಷದ ಸಂಘಟನಾ ಶಕ್ತಿಯಾಗಿದ್ದಾರೆ. ಸುಧೀರ್ಘ ರಾಜಕೀಯ ಜೀವನದಲ್ಲಿ ಎಲ್ಲ ಮುಖಂಡರೊಂದಿಗೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದ್ದಾರೆ’ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಬಣ್ಣಿಸಿದರು.</p>.<p>ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಸಣ್ಣ ನೀರಾವರಿ ಸಚಿವ ಎನ್. ಎಸ್.ಬೋಸರಾಜು ಅವರ 79ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಚೈತನ್ಯ ಸಾಗರ’ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಬೋಸರಾಜು ನನ್ನ ತಂದೆ ಕೆ.ಎಚ್.ಪಾಟೀಲ ಅವರೊಂದಿಗೆ ಆತ್ಮೀಯರಾಗಿದ್ದರು. 1972ರಿಂದ ಬೋಸರಾಜ ಅವರೊಂದಿಗೆ ಒಡನಾಟ ಇದೆ. ನೀರಾವರಿಗೆ ಸಂಬಂಧಪಟ್ಟ ವಿಷಯಗಳನ್ನು ಅವರಿಂದ ಅರಿತುಕೊಂಡೆ. ಅವರು ಗುರುವಾಗಿ ನನಗೆ ತಿಳಿವಳಿಕೆ ನೀಡಿದ್ದಾರೆ’ ಎಂದರು.</p>.<p>‘ತೆಲಂಗಾಣದ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಅವರ ತ್ಯಾಗ, ಸಾಧನೆ ಗುರುತಿಸಿ ಪಕ್ಷ ಅವರಿಗೆ ಮಹತ್ವದ ಸ್ಥಾನ ನೀಡಿದೆ. ಚೈತನ್ಯ ಸಾಗರ ಗ್ರಂಥದಲ್ಲಿ ಯುವಜನರಿಗೆ ನಾಯಕತ್ವದ ಸ್ಪೂರ್ತಿ ತುಂಬವ ಅಂಶಗಳು ಇವೆ’ ಎಂದು ತಿಳಿಸಿದರು.</p>.<p class="Briefhead">‘ಕಾಂಗ್ರೆಸ್ ಸರ್ಕಾರ ರಚನೆಗೆ ಪ್ರೇರಣೆ’</p>.<p>‘ಕಾಂಗ್ರೆಸ್ಗೆ ನಿಷ್ಠರಾಗಿರುವ ಎನ್.ಎಸ್.ಬೋಸರಾಜು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಪ್ರೇರಣೆಯಾಗಿದ್ದಾರೆ’ ಎಂದು ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಹೇಳಿದರು.</p>.<p>‘50 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದು, ಪಕ್ಷದ ಸಲಹೆಗಾರರಾಗಿ, ಸಂಘಟನಾ ಶಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅವರ ಪಾತ್ರವೂ ಇದೆ. ತೆಲಂಗಾಣ ಹಾಗೂ ಕರ್ನಾಟಕ ಒಗ್ಗೂಡಿ ಸಾಗಲಿವೆ. ಬೋಸರಾಜು ಜನ್ಮದಿನದ ಅಂಗವಾಗಿ ಗ್ರಂಥ ಹೊರ ತಂದಿರುವುದು ಜನರ ಅಭಿಮಾನಕ್ಕೆ ಸಾಕ್ಷಿಯಾಗಿದೆ’ ಎಂದು ಬಣ್ಣಿಸಿದರು.</p>.<p class="Briefhead">‘ಬೋಸರಾಜು ರಾಷ್ಟ್ರದ ಆಸ್ತಿ’</p>.<p>‘ಜಟಿಲ ಹಾಗೂ ವಿಷಮ ಪರಿಸ್ಥಿತಿಯಲ್ಲೂ ತಾಳ್ಮೆ ವಹಿಸುವ ಅವರ ಗುಣವೇ ಅವರನ್ನು ಎತ್ತರಕ್ಕೆ ಬೆಳೆಯುವಂತೆ ಮಾಡಿದೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.</p>.<p>‘ಬೋಸರಾಜು ಅವರು ಎಲ್ಲರ ವಿಶ್ವಾಸ ಗಳಿಸಿದ್ದಾರೆ. ನನಗೂ ರಾಜಕೀಯ ಮಾರ್ಗದರ್ಶನ ಮಾಡಿದ್ದಾರೆ. ಅವರ ವ್ಯಕ್ತಿತ್ವವೇ ದಾರಿ ದೀಪವಾಗಿದೆ. ಅವರು ಪಕ್ಷಕ್ಕೆ ಅಷ್ಟೇ ಅಲ್ಲ; ರಾಜ್ಯ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>