ರಾಯಚೂರು ಮತ್ತು ಹೈದರಾಬಾದ್ ಮಧ್ಯೆ ಸಂಪರ್ಕ ಕಲ್ಪಿಸುವ ಹಗರಿ –ಜಡಚರ್ಲಾನಡುವಿನ ರಾಷ್ಟ್ರೀಯ ಹೆದ್ದಾರಿ 167ರ ಮಾರ್ಗದಲ್ಲಿ ಮಾದರಿ ಸೇತುವೆ ನಿರ್ಮಾಣವಾಗಲಿದೆ.ಹೈದರಾಬಾದ್ ನಿಜಾಮರ ಆಡಳಿತ ಅವಧಿಯಲ್ಲಿ ದೇವಸೂಗೂರಿನ ಕೃಷ್ಣಾನದಿಗೆ ಈಗಾಗಲೇ ಸೇತುವೆ ಇದೆ. ಇದು 35 ಕಮಾನುಗಳನ್ನು ಹೊಂದಿದೆ. 20 ಅಡಿ ಅಗಲ, 2,488 ಅಡಿ ಉದ್ದ, 60 ಅಡಿ ಎತ್ತರದ ಸೇತುವೆಯನ್ನು ಅಂದಿನ ಹೈದರಾಬಾದ್ ನಿಜಾಮರಾಗಿದ್ದ ಮೀರ್ ಉಸ್ಮಾನ್ ಅಲೀಖಾನ್ ಬಹದ್ದೂರ್ ನಿರ್ಮಿಸಿದ್ದರು. ಈ ಸೇತುವೆಯು ರಾಷ್ಟ್ರೀಯ ಹೆದ್ದಾರಿಯ ವಿಸ್ತೀರ್ಣಕ್ಕೆ ಹೋಲಿಸಿದರೆ ಸಾಕಷ್ಟು ಕಿರಿದಾಗಿದೆ.