'ಶಾಲೆಯಲ್ಲಿ ಮಲಮೂತ್ರ ಮಾಡಿದ ಕಾರಣ ಶಿಕ್ಷಕರೊಬ್ಬರು ವಿದ್ಯಾರ್ಥಿ ಅಖಿಲ ಮೇಲೆ ಬಿಸಿ ನೀರು ಚೆಲ್ಲಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ. ಇದರ ತನಿಖೆ ನಡೆಸಿ, ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ತೀವ್ರ ಗಾಯಗೊಂಡ ವಿದ್ಯಾರ್ಥಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು' ಎಂದು ಜಿಲ್ಲಾ ಮಕ್ಕಳ ಆಯೋಗದ ನಿರ್ದೇಶಕ ಸುದರ್ಶನ ರಾಜ್ಯ ಮಕ್ಕಳ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ.