<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ): ಮನೆ</strong> ಬಿಟ್ಟು ಹೋಗಿದ್ದ ತಾಲ್ಲೂಕಿನ ಕರಡಕಲ್ ಗ್ರಾಮದ ಮೂವರು ಬಾಲಕರು ಹಾಸನ ಜಿಲ್ಲೆಯ ಆಲೂರಿನಲ್ಲಿ ಪತ್ತೆಯಾಗಿದ್ದಾರೆ.</p>.<p>ಶಾಲೆಗೆ ತೆರಳಲು ಇಷ್ಟವಿಲ್ಲದ ಕಾರಣ ಮನೆ ಬಿಟ್ಟು ಬಂದಿದ್ದೇವೆ ಎಂದು ಬಾಲಕರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕರಡಕಲ್ ಗ್ರಾಮದ ಬಾಲಕರಾದ ಮಂಜುನಾಥ ಬ್ಯಾಗಿ (14), ರೋಹಿತ್ ಭಜಂತ್ರಿ (14) ಹಾಗೂ ಪ್ರಜ್ವಲ್ ಗದ್ದೆಪ್ಪ (16) ನಾಪತ್ತೆಯಾದ ಕುರಿತು ಜೂನ್ 6ರಂದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಬಾಲಕರ ಪತ್ತೆಗಾಗಿ ಪೊಲೀಸ್ ಇಲಾಖೆಯು ಸಿಬ್ಬಂದಿ ಈರಣ್ಣ, ಭರಮನಗೌಡ, ಶ್ರೀಕಾಂತ, ಭೀಮಣ್ಣ ಹಾಗೂ ಸಿದ್ದಪ್ಪ ಅವರನ್ನು ಒಳಗೊಂಡ ತಂಡ ರಚಿಸಿತ್ತು.</p>.<p>ಬಾಲಕರು ಕೋಲಾರ, ಮಂಗಳೂರು, ಬೆಂಗಳೂರು ಹಾಗೂ ಇತರೆ ನಗರಗಳಿಗೆ ತೆರಳಿರುವ ಸಾಧ್ಯತೆಯ ಆಧಾರದ ಮೇಲೆ ಪೊಲೀಸ್ ತಂಡವನ್ನು ಅಲ್ಲಿಗೆ ಕಳುಹಿಸಲಾಗಿತ್ತು. ಈ ವೇಳೆ ಹಾಸನ ಜಿಲ್ಲೆಯ ಆಲೂರಿನನಲ್ಲಿ ಬಾಲಕರು ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ. </p>.<p>ಬಾಲಕರನ್ನು ವಿಚಾರಿಸಿದಾಗ ಶಾಲೆಗೆ ಹೋಗಲು ಇಷ್ಟವಿಲ್ಲ. ಮನೆ ಬಿಟ್ಟು ಹೋದರೆ ಶಾಲೆಗೆ ಹೋಗುವಂತೆ ತಂದೆ–ತಾಯಿ ಹೇಳುವುದಿಲ್ಲ ಎನ್ನುವ ಕಾರಣಕ್ಕೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು (ರಾಯಚೂರು ಜಿಲ್ಲೆ): ಮನೆ</strong> ಬಿಟ್ಟು ಹೋಗಿದ್ದ ತಾಲ್ಲೂಕಿನ ಕರಡಕಲ್ ಗ್ರಾಮದ ಮೂವರು ಬಾಲಕರು ಹಾಸನ ಜಿಲ್ಲೆಯ ಆಲೂರಿನಲ್ಲಿ ಪತ್ತೆಯಾಗಿದ್ದಾರೆ.</p>.<p>ಶಾಲೆಗೆ ತೆರಳಲು ಇಷ್ಟವಿಲ್ಲದ ಕಾರಣ ಮನೆ ಬಿಟ್ಟು ಬಂದಿದ್ದೇವೆ ಎಂದು ಬಾಲಕರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕರಡಕಲ್ ಗ್ರಾಮದ ಬಾಲಕರಾದ ಮಂಜುನಾಥ ಬ್ಯಾಗಿ (14), ರೋಹಿತ್ ಭಜಂತ್ರಿ (14) ಹಾಗೂ ಪ್ರಜ್ವಲ್ ಗದ್ದೆಪ್ಪ (16) ನಾಪತ್ತೆಯಾದ ಕುರಿತು ಜೂನ್ 6ರಂದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಬಾಲಕರ ಪತ್ತೆಗಾಗಿ ಪೊಲೀಸ್ ಇಲಾಖೆಯು ಸಿಬ್ಬಂದಿ ಈರಣ್ಣ, ಭರಮನಗೌಡ, ಶ್ರೀಕಾಂತ, ಭೀಮಣ್ಣ ಹಾಗೂ ಸಿದ್ದಪ್ಪ ಅವರನ್ನು ಒಳಗೊಂಡ ತಂಡ ರಚಿಸಿತ್ತು.</p>.<p>ಬಾಲಕರು ಕೋಲಾರ, ಮಂಗಳೂರು, ಬೆಂಗಳೂರು ಹಾಗೂ ಇತರೆ ನಗರಗಳಿಗೆ ತೆರಳಿರುವ ಸಾಧ್ಯತೆಯ ಆಧಾರದ ಮೇಲೆ ಪೊಲೀಸ್ ತಂಡವನ್ನು ಅಲ್ಲಿಗೆ ಕಳುಹಿಸಲಾಗಿತ್ತು. ಈ ವೇಳೆ ಹಾಸನ ಜಿಲ್ಲೆಯ ಆಲೂರಿನನಲ್ಲಿ ಬಾಲಕರು ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ. </p>.<p>ಬಾಲಕರನ್ನು ವಿಚಾರಿಸಿದಾಗ ಶಾಲೆಗೆ ಹೋಗಲು ಇಷ್ಟವಿಲ್ಲ. ಮನೆ ಬಿಟ್ಟು ಹೋದರೆ ಶಾಲೆಗೆ ಹೋಗುವಂತೆ ತಂದೆ–ತಾಯಿ ಹೇಳುವುದಿಲ್ಲ ಎನ್ನುವ ಕಾರಣಕ್ಕೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>