<p><strong>ಹಟ್ಟಿಚಿನ್ನದಗಣಿ:</strong> ‘ದೇಶದಲ್ಲಿ ಜನರು ಜಾತಿ–ಧರ್ಮದ ಹೆಸರಿನಲ್ಲಿ ಹೊಡೆದಾಡುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಇದರ ನಿರ್ಮೂಲನೆ ಸಾಧ್ಯ’ ಎಂದು ಕಾಂಗ್ರೆಸ್ ಮುಖಂಡ ರವಿ ಪಾಟೀಲ ಹೇಳಿದರು.</p>.<p>ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಆಪ್ತರ ಸಭೆಯಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ನ ಐದು ಗ್ಯಾರಂಟಿಗಳು ಪ್ರತಿಯೊಂದು ಮನೆಯನ್ನೂ ತಲುಪಿವೆ. ಇದು ಗ್ಯಾರಂಟಿಗಳನ್ನು ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದವರಿಗೆ ನುಂಗಲಾಗದ ತುಪ್ಪವಾಗಿ ಪರಿಣಮಿಸಿದೆ ಎಂದು ಆರೋಪ ಮಾಡಿದರು.</p>.<p>ರಾಯಚೂರಿಗೆ ಎಚ್.ಮುನಿಯಪ್ಪನವರು ಬಂದಾಗ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಈಗಾಗಲೇ ತೆರೆಮರೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಹೈಕಮಾಂಡ್ ಟಿಕೆಟ್ ನೀಡುತ್ತಾರೆ ಎನ್ನುವ ಭರವಸೆ ಇದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತಿದ್ದೇವೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಗುರುಗುಂಟಾ ಮಾತನಾಡಿ,‘ಪಟ್ಟಣದ ಪ್ರತಿಯೊಂದು ವಾರ್ಡ್ನಲ್ಲೂ ಕಾಂಗ್ರೆಸ್ ಪಕ್ಷ ಬಲಪಡಿಸಬೇಕು. 5 ರಿಂದ 6 ಸಾವಿರ ಮತಗಳಿಂದ ರವಿ ಪಾಟೀಲ ಅವರನ್ನು ಗೆಲ್ಲಿಸಬೇಕು’ ಎಂದು ಹೇಳಿದರು.</p>.<p>ಅಂಜದ್ ಸೇಠ್, ಶಾಂತಪ್ಪ ಆನ್ವರಿ, ಅಹ್ಮದ್ ಬಾಬಾ, ಜಿ.ಶ್ರೀನಿವಾಸ ಹಾಗೂ ಶಂಶುದ್ದಿನ್ ಮಾತನಾಡಿದರು.</p>.<p>ಮುಖಂಡರಾದ ಜೆ.ಸುಭಾನ್, ನಿಂಗಪ್ಪ, ರಂಗನಾಥ ಮುಂಡರಗಿ, ದೇವೆಂದ್ರಪ್ಪ, ಮಹಿಬೂಬ್ ಮೆಕ್ಯಾನಿಕ್, ಕನಕರಾಜಗೌಡ, ಮೌಲಾಬಾಬ, ಬುಜ್ಜ ನಾಯಕ, ಸದಾನಂದ, ರಾಜಶೇಖರ ನಾಯಕ, ಮುಕ್ತಾರ್, ಸೈಯದ್ ಪಾಷಾ, ದುರುಗಮ್ಮ, ಸಿದ್ದಪ್ಪ ಮುಂಡರಗಿ, ದುರುಗಣ್ಣ ನಾಯಕ ಹಾಗೂ ಬಾಬು ನಾಯಿಕೊಡಿ ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿಚಿನ್ನದಗಣಿ:</strong> ‘ದೇಶದಲ್ಲಿ ಜನರು ಜಾತಿ–ಧರ್ಮದ ಹೆಸರಿನಲ್ಲಿ ಹೊಡೆದಾಡುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಇದರ ನಿರ್ಮೂಲನೆ ಸಾಧ್ಯ’ ಎಂದು ಕಾಂಗ್ರೆಸ್ ಮುಖಂಡ ರವಿ ಪಾಟೀಲ ಹೇಳಿದರು.</p>.<p>ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಆಪ್ತರ ಸಭೆಯಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ನ ಐದು ಗ್ಯಾರಂಟಿಗಳು ಪ್ರತಿಯೊಂದು ಮನೆಯನ್ನೂ ತಲುಪಿವೆ. ಇದು ಗ್ಯಾರಂಟಿಗಳನ್ನು ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದವರಿಗೆ ನುಂಗಲಾಗದ ತುಪ್ಪವಾಗಿ ಪರಿಣಮಿಸಿದೆ ಎಂದು ಆರೋಪ ಮಾಡಿದರು.</p>.<p>ರಾಯಚೂರಿಗೆ ಎಚ್.ಮುನಿಯಪ್ಪನವರು ಬಂದಾಗ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಈಗಾಗಲೇ ತೆರೆಮರೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಹೈಕಮಾಂಡ್ ಟಿಕೆಟ್ ನೀಡುತ್ತಾರೆ ಎನ್ನುವ ಭರವಸೆ ಇದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತಿದ್ದೇವೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಗುರುಗುಂಟಾ ಮಾತನಾಡಿ,‘ಪಟ್ಟಣದ ಪ್ರತಿಯೊಂದು ವಾರ್ಡ್ನಲ್ಲೂ ಕಾಂಗ್ರೆಸ್ ಪಕ್ಷ ಬಲಪಡಿಸಬೇಕು. 5 ರಿಂದ 6 ಸಾವಿರ ಮತಗಳಿಂದ ರವಿ ಪಾಟೀಲ ಅವರನ್ನು ಗೆಲ್ಲಿಸಬೇಕು’ ಎಂದು ಹೇಳಿದರು.</p>.<p>ಅಂಜದ್ ಸೇಠ್, ಶಾಂತಪ್ಪ ಆನ್ವರಿ, ಅಹ್ಮದ್ ಬಾಬಾ, ಜಿ.ಶ್ರೀನಿವಾಸ ಹಾಗೂ ಶಂಶುದ್ದಿನ್ ಮಾತನಾಡಿದರು.</p>.<p>ಮುಖಂಡರಾದ ಜೆ.ಸುಭಾನ್, ನಿಂಗಪ್ಪ, ರಂಗನಾಥ ಮುಂಡರಗಿ, ದೇವೆಂದ್ರಪ್ಪ, ಮಹಿಬೂಬ್ ಮೆಕ್ಯಾನಿಕ್, ಕನಕರಾಜಗೌಡ, ಮೌಲಾಬಾಬ, ಬುಜ್ಜ ನಾಯಕ, ಸದಾನಂದ, ರಾಜಶೇಖರ ನಾಯಕ, ಮುಕ್ತಾರ್, ಸೈಯದ್ ಪಾಷಾ, ದುರುಗಮ್ಮ, ಸಿದ್ದಪ್ಪ ಮುಂಡರಗಿ, ದುರುಗಣ್ಣ ನಾಯಕ ಹಾಗೂ ಬಾಬು ನಾಯಿಕೊಡಿ ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>