ರಾಯಚೂರು: ‘ಬಸವಣ್ಣನ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅದನ್ನು ಎಲ್ಲರೂ ಅರಿಯಬೇಕು. ಜನರು ಆಚಾರ, ವಿಚಾರ ಮರೆತು ನಡೆಯುತ್ತಿದ್ದಾರೆ. ರೇಣುಕಾಚಾರ್ಯರು ಹೇಳಿದ ತತ್ವ, ಸಿದ್ಧಾಂತಗಳು ಹಾಗೂ 12ನೇ ಶತಮಾನದ ಶರಣರು ಹೇಳಿದ ವಿಚಾರಧಾರೆಗಳು ಬೇರೆಯಲ್ಲ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.