ರಾಯಚೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ಮಂತ್ರಾಲಯಕ್ಕೆ ಬುಧವಾರ ರಾತ್ರಿಯೇ ಬಂದಿದ್ದು, ಗುರುವಾರ ಬೆಳಿಗ್ಗೆ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು.
ಆನಂತರ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ಬಿ.ವೈ.ವಿಜಯೇಂದ್ರ ಹಾಗೂ ಬಿ.ವೈ.ರಾಘವೇಂದ್ರ ದಂಪತಿ ಸಮೇತರಾಗಿ ಬಂದಿದ್ದರು.