<p><strong>ಮಸ್ಕಿ:</strong> ‘ರಾಜ್ಯದಲ್ಲಿ ನಿಜವಾದ ಜೋಡೆತ್ತು ಎಂದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಮತಗಳಿಂದ ಗೆದ್ದಿದೆ’ ಎಂದರು.</p>.<p>ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅತಿಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿಗಿಂತ ಸ್ವ ಅಭಿವೃದ್ಧಿ ಮುಖ್ಯವಾಗಿದೆ. ಆ ಕಾರಣಕ್ಕಾಗಿ ಕಾಂಗ್ರೆಸ್ ಮೂಲೆ ಗುಂಪಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಪ್ರತಾಪಗೌಡ ಪಾಟೀಲ ಅವರು ಅತಿಹೆಚ್ವು ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ. ಪ್ರತಿಗ್ರಾಮ ಪಂಚಾಯತಿ ಹಾಗೂ ಬೂತ್ ಮಟ್ಟದಲ್ಲಿ ಮುಖಂಡರಿಗೆ ಉಸ್ತುವಾರಿ ವಹಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ‘ರಾಜ್ಯದಲ್ಲಿ ನಿಜವಾದ ಜೋಡೆತ್ತು ಎಂದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅತಿಹೆಚ್ಚು ಮತಗಳಿಂದ ಗೆದ್ದಿದೆ’ ಎಂದರು.</p>.<p>ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಉಪ ಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅತಿಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಗೆ ರಾಜ್ಯದ ಅಭಿವೃದ್ಧಿಗಿಂತ ಸ್ವ ಅಭಿವೃದ್ಧಿ ಮುಖ್ಯವಾಗಿದೆ. ಆ ಕಾರಣಕ್ಕಾಗಿ ಕಾಂಗ್ರೆಸ್ ಮೂಲೆ ಗುಂಪಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಪ್ರತಾಪಗೌಡ ಪಾಟೀಲ ಅವರು ಅತಿಹೆಚ್ವು ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ. ಪ್ರತಿಗ್ರಾಮ ಪಂಚಾಯತಿ ಹಾಗೂ ಬೂತ್ ಮಟ್ಟದಲ್ಲಿ ಮುಖಂಡರಿಗೆ ಉಸ್ತುವಾರಿ ವಹಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>