ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಶತಮಾನಗಳಿಂದಲೂ ಶೊಷಣೆಗೆ ಒಳಗಾಗಿದ್ದ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ಸಮುದಾಯಗಳಿಗೆ ಅರ್ಥಿಕ, ಸಾಮಾಜಿಕ ಸಮಾನತೆಗೆ ಸಂವಿಧಾನದಿಂದ ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಇತ್ತಿಚಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ್ ರಾವ್ ಮತ್ತು ಹೇಮಂತ್ ಗುಪ್ತ ಅವರನ್ನೊಳಗೊಂಡ ಪೀಠ ಈ ಸಮುದಾಯಗಳಿಗೆ ಮೀಸಲಾತಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಮೀಸಲಾತಿ ನೀಡಲೇಬೇಕೆಂದೇನಿಲ್ಲ ಅದು ಸರ್ಕಾರದ ವಿವೇಚನಾಧಿಕಾರ, ಮೀಸಲಾತಿ ಮೂಲಭೂತ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ ಎಂಬ ತೀರ್ಪು ನೀಡಿರುವುದು ಸರಿಯಲ್ಲ ಎಂದು ಖಂಡಿಸಿದರು.