‘ಜಿಲ್ಲೆಯ ವ್ಯಾಪ್ತಿಯಲ್ಲಿ 35 ಸಾರಿಗೆ ಬಸ್ಗಳು ಸಂಚಾರ ಆರಂಭಿಸಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಅಲ್ಲಿಂದ ರಾಯಚೂರಿಗೆ ಹೆಚ್ಚುವರಿ ಬಸ್ಗಳನ್ನು ಬಿಡಿಸಲಾಗಿದೆ. 50ಕ್ಕೂ ಹೆಚ್ಚಿನ ಬಸ್ಗಳು ಸಂಚಾರ ಆರಂಭಿಸಿವೆ. ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ಸಂಸ್ಥೆಯಿಂದ 20 ಹೆಚ್ಚುವರಿ ಬಸ್ಗಳನ್ನು ಬಿಡಲಾಗಿದೆ’ ಎಂದರು.