<p><strong>ಮಸ್ಕಿ: </strong>ಉಪ ಚುನಾವಣೆ ಅಖಾಡಕ್ಕೆ ಶುಕ್ರವಾರದಿಂದ ಅಧಿಕೃತವಾಗಿ ತೊಡಗಿಸಿಕೊಳ್ಳಲು ಬಂದಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಸ್ಕಿಯಲ್ಲಿ ಹೂಮಳೆ ಸುರಿಸಿ ಸ್ವಾಗತಿಸಲಾಯಿತು.</p>.<p>ಮುದಗಲ್ ಪಟ್ಟಣದಿಂದ ಆಗಮಿಸಿದ ಅವರನ್ನು ಮಸ್ಕಿ ಕ್ಷೇತ್ರದ ಗಡಿಯಲ್ಲಿರುವ ಸಂತೆಕೆಲ್ಲೂರು, ಅಂಕುಶದೊಡ್ಡಿ ಗ್ರಾಮಗಳಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.</p>.<p>ಮಸ್ಕಿ ಪಟ್ಟಣದಲ್ಲಿ ವಿಜಯೇಂದ್ರ ಅವರು ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆರೆದ ವಾಹನ ಏರಿದರು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಬೈಕ್ ರ್ಯಾಲಿ ನಡೆಯಿತು. ಗಾಂಧಿ ನಗರದಲ್ಲಿ ನೂರಾರು ಯುವಕರು ಜೆಸಿಬಿ ಯಂತ್ರದ ಸಹಾಯದಿಂದ ಹೂವಿನ ಸುರಿಮಳೆ ಮಾಡಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/karnataka-politics-congress-bjp-tweet-war-on-bs-yediyurappa-nalin-kumar-kateel-ramesh-jarakiholi-818678.html" target="_blank">ಬಿಜೆಪಿ ಸರ್ಕಾರದ ಆಡಳಿತ ತುಘಲಕ್ ದರ್ಬಾರ್ ಇದ್ದಂಗೆ: ಕಾಂಗ್ರೆಸ್</a></strong></p>.<p>ದಾರಿಯಲ್ಲಿ ಮಹಿಳೆಯರು ಆರತಿ ಬೆಳಗಿ ತಿಲಕ ಇಟ್ಟರು. ಅಗಸಿ, ಮುಖ್ಯ ಬಜಾರ, ದೈವದಕಟ್ಟೆ, ತೇರ ಬೀದಿ, ಕನಕವೃತ್ತ, ವಾಲ್ಮೀಕಿ ವೃತ್ತ, ಬಸವ ವೃತ್ತದ ಮೂಲಕ ಬಸವೇಶ್ವರ ನಗರದ ಬಿಜೆಪಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.</p>.<p>ಕನಕವೃತ್ತದಲ್ಲಿ ಜೆಸಿಬಿ ಯಂತ್ರದ ಮೂಲಕ ಬೃಹತ್ ಹೂವಿನ ಹಾರ ಹಾಕಿ ಪಕ್ಷದ ಕಾರ್ಯಕರ್ತರು ಅಭಿನಂದಿಸಿದರು.</p>.<p>ಶಾಸಕ ರಾಜುಗೌಡ, ಡಾ. ಶಿವರಾಜ ಪಾಟೀಲ, ಮಾಜಿ ಶಾಸಕ ಮಾನಪ್ಪ ವಜ್ಜಲ್, ಮುಖಂಡ ಮಹಾದೇವಪ್ಪಗೌಡ ಪಾಟೀಲ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/karnataka-politics-congress-bjp-tweet-war-on-election-2021-rss-bjp-ideology-tamil-nadu-puducherry-818655.html" target="_blank">ಕಲ್ಯಾಣ ಕರ್ನಾಟಕದ ವಿರೋಧಿ ಮಲ್ಲಿಕಾರ್ಜುನ ಖರ್ಗೆ: ಬಿಜೆಪಿ ಟ್ವೀಟ್</a></strong></p>.<p><strong><a href="https://www.prajavani.net/india-news/election-2021-rss-bjp-ideology-is-poisonous-dont-allow-it-to-enter-tamil-nadu-puducherry-mallikarjun-818612.html" target="_blank">ಆರ್ಎಸ್ಎಸ್, ಬಿಜೆಪಿ ಸಿದ್ಧಾಂತವು ವಿಷಕಾರಿ: ಮಲ್ಲಿಕಾರ್ಜುನ ಖರ್ಗೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಉಪ ಚುನಾವಣೆ ಅಖಾಡಕ್ಕೆ ಶುಕ್ರವಾರದಿಂದ ಅಧಿಕೃತವಾಗಿ ತೊಡಗಿಸಿಕೊಳ್ಳಲು ಬಂದಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಸ್ಕಿಯಲ್ಲಿ ಹೂಮಳೆ ಸುರಿಸಿ ಸ್ವಾಗತಿಸಲಾಯಿತು.</p>.<p>ಮುದಗಲ್ ಪಟ್ಟಣದಿಂದ ಆಗಮಿಸಿದ ಅವರನ್ನು ಮಸ್ಕಿ ಕ್ಷೇತ್ರದ ಗಡಿಯಲ್ಲಿರುವ ಸಂತೆಕೆಲ್ಲೂರು, ಅಂಕುಶದೊಡ್ಡಿ ಗ್ರಾಮಗಳಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.</p>.<p>ಮಸ್ಕಿ ಪಟ್ಟಣದಲ್ಲಿ ವಿಜಯೇಂದ್ರ ಅವರು ಮಹಾತ್ಮ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆರೆದ ವಾಹನ ಏರಿದರು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಬೈಕ್ ರ್ಯಾಲಿ ನಡೆಯಿತು. ಗಾಂಧಿ ನಗರದಲ್ಲಿ ನೂರಾರು ಯುವಕರು ಜೆಸಿಬಿ ಯಂತ್ರದ ಸಹಾಯದಿಂದ ಹೂವಿನ ಸುರಿಮಳೆ ಮಾಡಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/karnataka-politics-congress-bjp-tweet-war-on-bs-yediyurappa-nalin-kumar-kateel-ramesh-jarakiholi-818678.html" target="_blank">ಬಿಜೆಪಿ ಸರ್ಕಾರದ ಆಡಳಿತ ತುಘಲಕ್ ದರ್ಬಾರ್ ಇದ್ದಂಗೆ: ಕಾಂಗ್ರೆಸ್</a></strong></p>.<p>ದಾರಿಯಲ್ಲಿ ಮಹಿಳೆಯರು ಆರತಿ ಬೆಳಗಿ ತಿಲಕ ಇಟ್ಟರು. ಅಗಸಿ, ಮುಖ್ಯ ಬಜಾರ, ದೈವದಕಟ್ಟೆ, ತೇರ ಬೀದಿ, ಕನಕವೃತ್ತ, ವಾಲ್ಮೀಕಿ ವೃತ್ತ, ಬಸವ ವೃತ್ತದ ಮೂಲಕ ಬಸವೇಶ್ವರ ನಗರದ ಬಿಜೆಪಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.</p>.<p>ಕನಕವೃತ್ತದಲ್ಲಿ ಜೆಸಿಬಿ ಯಂತ್ರದ ಮೂಲಕ ಬೃಹತ್ ಹೂವಿನ ಹಾರ ಹಾಕಿ ಪಕ್ಷದ ಕಾರ್ಯಕರ್ತರು ಅಭಿನಂದಿಸಿದರು.</p>.<p>ಶಾಸಕ ರಾಜುಗೌಡ, ಡಾ. ಶಿವರಾಜ ಪಾಟೀಲ, ಮಾಜಿ ಶಾಸಕ ಮಾನಪ್ಪ ವಜ್ಜಲ್, ಮುಖಂಡ ಮಹಾದೇವಪ್ಪಗೌಡ ಪಾಟೀಲ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/karnataka-news/karnataka-politics-congress-bjp-tweet-war-on-election-2021-rss-bjp-ideology-tamil-nadu-puducherry-818655.html" target="_blank">ಕಲ್ಯಾಣ ಕರ್ನಾಟಕದ ವಿರೋಧಿ ಮಲ್ಲಿಕಾರ್ಜುನ ಖರ್ಗೆ: ಬಿಜೆಪಿ ಟ್ವೀಟ್</a></strong></p>.<p><strong><a href="https://www.prajavani.net/india-news/election-2021-rss-bjp-ideology-is-poisonous-dont-allow-it-to-enter-tamil-nadu-puducherry-mallikarjun-818612.html" target="_blank">ಆರ್ಎಸ್ಎಸ್, ಬಿಜೆಪಿ ಸಿದ್ಧಾಂತವು ವಿಷಕಾರಿ: ಮಲ್ಲಿಕಾರ್ಜುನ ಖರ್ಗೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>