<p><strong>ರಾಯಚೂರು</strong>: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ.</p>.<p>ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.</p>.<p>ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ ಹೋಗುವುದರಿಂದ ರಸ್ತೆ ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.</p>.<p>ಈಚೆಗೆ ಮಳೆ ಅಬ್ಬರಿಸಿದ ಸಂದರ್ಭದಲ್ಲೇ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿಪತ್ರ ಕೊಟ್ಟು ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದೇವೆ. ‘ಇದೀಗ ಬುಧವಾರ ರಾತ್ರಿ ಸುರಿದ ಮಳೆಗೆ ರಸ್ತೆ ಮತ್ತಷ್ಟು ಹಾಳಾಗಿದೆ’ ಎಂದು ಗ್ರಾಮದ ನಿವಾಸಿ ವೀರ ಪ್ರತಾಪ ರೆಡ್ಡಿ ತಿಳಿಸಿದ್ದಾರೆ.</p>.<p>ದೇವದುರ್ಗ, ಕವಿತಾಳ, ಮಾನ್ವಿ, ಲಿಂಗಸುಗೂರು, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ.</p>.<p>ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.</p>.<p>ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ ಹೋಗುವುದರಿಂದ ರಸ್ತೆ ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.</p>.<p>ಈಚೆಗೆ ಮಳೆ ಅಬ್ಬರಿಸಿದ ಸಂದರ್ಭದಲ್ಲೇ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿಪತ್ರ ಕೊಟ್ಟು ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದೇವೆ. ‘ಇದೀಗ ಬುಧವಾರ ರಾತ್ರಿ ಸುರಿದ ಮಳೆಗೆ ರಸ್ತೆ ಮತ್ತಷ್ಟು ಹಾಳಾಗಿದೆ’ ಎಂದು ಗ್ರಾಮದ ನಿವಾಸಿ ವೀರ ಪ್ರತಾಪ ರೆಡ್ಡಿ ತಿಳಿಸಿದ್ದಾರೆ.</p>.<p>ದೇವದುರ್ಗ, ಕವಿತಾಳ, ಮಾನ್ವಿ, ಲಿಂಗಸುಗೂರು, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>