ಶಕ್ತಿನಗರ: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗದ್ವಾಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಾರಲಪಾಡ್, ಕನ್ನಂಪಾಡ್, ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸರೀತಾ ತಿರುಪತಯ್ಯ ಅವರ ಪರವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಅವರು ಈಚೆಗೆ ಪ್ರಚಾರ ನಡೆಸಿದರು.