ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಲಂಗಾಣ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ಸರೀತಾ ಪರ ಪ್ರಚಾರ

Published 27 ನವೆಂಬರ್ 2023, 13:37 IST
Last Updated 27 ನವೆಂಬರ್ 2023, 13:37 IST
ಅಕ್ಷರ ಗಾತ್ರ

ಶಕ್ತಿನಗರ: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗದ್ವಾಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗಾರಲಪಾಡ್, ಕನ್ನಂಪಾಡ್, ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸರೀತಾ ತಿರುಪತಯ್ಯ ಅವರ ಪರವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಅವರು ಈಚೆಗೆ ಪ್ರಚಾರ ನಡೆಸಿದರು.

ಶಾಸಕ ಬಸನಗೌಡ ದದ್ದಲ್ ಮಾತನಾಡಿ, ‘ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಸತ್ಯ. ಜನರ ಅಭಿಪ್ರಾಯ ಕಾಂಗ್ರೆಸ್ ಪರವಾಗಿದೆ. ಪಕ್ಷದ ಅಭ್ಯರ್ಥಿಯಾದ ಸರೀತಾ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ತರಬೇಕು’ ಎಂದು ಮನವಿ ಮಾಡಿದರು.

ಪಕ್ಷದ ಹಿರಿಯ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT