ಸರ್ಜಾಪುರದ ಯುವಕ ಬೆಂಗಳೂರಿನಿಂದ ಬಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಧುಮೇಹ, ರಕ್ತದೊತ್ತಡ ಕಾಯಿಲೆಗೆ ಚಿಕಿತ್ಸೆ ಪಡೆಯಲು ದಾಖಲಾಗಿದ್ದ. ಹೀಗಾಗಿ ಈತನ ಪ್ರಾಥಮಿಕ ಸಂಪರ್ಕ ಆಧಾರದ ಮೇಲೆ ಮೂವರು ವೈದ್ಯರು, 18 ಜನ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿ 35 ಜನರನ್ನು ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಬಂದ್ ಮಾಡಲಾಗಿದೆ.