<p><strong>ರಾಯಚೂರು: </strong>ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಕ್ರಾಸ್ ಬಳಿ ರಾಜ್ಯಹೆದ್ದಾರಿಯಲ್ಲಿ ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ತಂದೆ, ಮಗ ಹಾಗೂ ಮಗುವಿನ ಚಿಕ್ಕಮ್ಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.<br /><br />ಪಕ್ಕದ ಕಲ್ಲೂರು ಗ್ರಾಮದ ಬಸವರಾಜ ಮಾಸಳಿ(40), ಭೀಮವ್ವ ಮಾಸಳಿ(50) ಹಾಗೂ ನರೇಶ್(8) ಮೃತರು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುರ್ಡಿ ಗ್ರಾಮಕ್ಕೆ ಕಲ್ಲೂರಿನಿಂದ ಬೈಕ್ ನಲ್ಲಿ ಹೊಗುವಾಗ ಅಪಘಾತವಾಗಿದೆ. ಕ್ಯಾಂಟರ್ ಮಾನ್ವಿಯಿಂದ ರಾಯಚೂರಿಗೆ ಬರುತ್ತಿತ್ತು.<br /><br />ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಡಿಕ್ಕಿ ಹೊಡೆದ ಕ್ಯಾಂಟರ್ ಪಕ್ಕದ ಜಮೀನಿಗೆ ನುಗ್ಗಿದೆ. ಮೃತ ದೇಹಗಳು ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಓದಿ...<a href="https://www.prajavani.net/karnataka-news/car-and-truck-accident-near-bidar-5-hyderabad-people-died-who-going-to-ganagapur-963497.html" target="_blank">ಬೀದರ್ ಬಳಿ ಭೀಕರ ಅಪಘಾತ: ಗಾಣಗಾಪುರಕ್ಕೆ ಹೊರಟಿದ್ದ ಹೈದರಾಬಾದ್ನ ಐವರು ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಕ್ರಾಸ್ ಬಳಿ ರಾಜ್ಯಹೆದ್ದಾರಿಯಲ್ಲಿ ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ತಂದೆ, ಮಗ ಹಾಗೂ ಮಗುವಿನ ಚಿಕ್ಕಮ್ಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.<br /><br />ಪಕ್ಕದ ಕಲ್ಲೂರು ಗ್ರಾಮದ ಬಸವರಾಜ ಮಾಸಳಿ(40), ಭೀಮವ್ವ ಮಾಸಳಿ(50) ಹಾಗೂ ನರೇಶ್(8) ಮೃತರು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುರ್ಡಿ ಗ್ರಾಮಕ್ಕೆ ಕಲ್ಲೂರಿನಿಂದ ಬೈಕ್ ನಲ್ಲಿ ಹೊಗುವಾಗ ಅಪಘಾತವಾಗಿದೆ. ಕ್ಯಾಂಟರ್ ಮಾನ್ವಿಯಿಂದ ರಾಯಚೂರಿಗೆ ಬರುತ್ತಿತ್ತು.<br /><br />ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಡಿಕ್ಕಿ ಹೊಡೆದ ಕ್ಯಾಂಟರ್ ಪಕ್ಕದ ಜಮೀನಿಗೆ ನುಗ್ಗಿದೆ. ಮೃತ ದೇಹಗಳು ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಓದಿ...<a href="https://www.prajavani.net/karnataka-news/car-and-truck-accident-near-bidar-5-hyderabad-people-died-who-going-to-ganagapur-963497.html" target="_blank">ಬೀದರ್ ಬಳಿ ಭೀಕರ ಅಪಘಾತ: ಗಾಣಗಾಪುರಕ್ಕೆ ಹೊರಟಿದ್ದ ಹೈದರಾಬಾದ್ನ ಐವರು ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>