ರಾಯಚೂರು: ತಾಲ್ಲೂಕಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಆವರಣದಲ್ಲಿ ನಿಂತಿದ್ದ ಹೈಡ್ರೋ ವಾಹನಕ್ಕೆ ಕಾರು ಡಿಕ್ಕಿಯಾಗಿ ಖಾಸಗಿ ಕಂಪನಿ ಎಂಜಿನಿಯರ್ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಬಸಪ್ಪ ತಳವಾರ ಅವರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದು ಕೋಮಾ ಸ್ಥಿತಿಯಲ್ಲಿದ್ದಾರೆ. ಹೆಚ್ಚಿನಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿಸಲಾಗಿದೆ.