ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೈಯದ್ ರಹೀಮ್ ಮಾತನಾಡಿ, ಜಿಲ್ಲೆಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿದ್ದು, ಈ ಬಾರಿ ಕಡಲೆ, ಜೋಳ, ಆಗಸೆ, ಮೆಕ್ಕೆಜೋಳ, ಗೋಧಿ, ಹುರುಳಿ ಸೇರಿದಂತೆ ವಿವಿಧ ಬೆಳೆಗಳು ಬಿತ್ತನೆಯಾಗಿದೆ. ಇತ್ತೀಚೆಗೆ ಸುರಿದ ಮಳೆ ಗಾಳಿಗೆ ಜಿಲ್ಲೆಯಲ್ಲಿ 280 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಜಲಾವೃತಗೊಂಡಿದೆ ಎಂದು ತಿಳಿಸಿದರು.