<p><strong>ರಾಯಚೂರು</strong>: ತಾಲ್ಲೂಕಿನ ಚಂದ್ರಬಂಡಾ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂಡದ ಅಧಿಕಾರಿ ಕುಮುದ್ ದುಬೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮೊದಲಿಗೆ ಚಂದ್ರಬಂಡಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಕಾಮಗಾರಿ ಕಡತ, ನೋಂದಣಿ, ಎನ್.ಎಂ.ಎ.ಎಸ್. ಹಾಜರಾತಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದರು. ಬಳಿಕ<br> ಅರಿಸಿಗೇರಾ ತಾಂಡದಲ್ಲಿರುವ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. </p><p>ನಾಗನದೊಡ್ಡ ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯದಲ್ಲಿ ಕಂದಕ ಬದು ನಿರ್ಮಾಣ, ದನದ ಕೊಟ್ಟಿಗೆ ಹಾಗೂ ಚಿಂತಲ ಕುಂಟ ಅಮೃತ ಸರೋವರ ಕೆರೆ ಕಾಮಗಾರಿಗಳನ್ನು ವೀಕ್ಷಿಸಿದರು.</p>.<p>ಚಂದ್ರಬಂಡಾಗ್ರಾಮದಲ್ಲಿರುವ ಕೀರಾಕುಂಟ ಅಮೃತ ಸರೋವರ ಕೆರೆ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು. ಬಾಯಿದೊಡ್ಡಿ ಗ್ರಾಮ ಪಂಚಾಯಿತಿಯ ಕಡಗಂದೊಡ್ಡಿ ಗ್ರಾಮದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.</p><p>ನಂತರ ಕುರಬದೊಡ್ಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರ ಎನ್.ಎಂ.ಎ.ಎಸ್. ಹಾಜರಾತಿ, ಉದ್ಯೋಗ ಚೀಟಿ ಮತ್ತು ಕೆಲಸದ ಪ್ರಮಾಣವನ್ನು ಪರಿಶೀಲಿಸಿದರು. ನಂತರ ಚಂದ್ರಬಂಡಾ ಗ್ರಾಮ ಪಂಚಾಯಿತಿಯ ಕಟ್ಲಟ್ಕೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.</p><p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ, ಸಹಾಯಕ ನಿರ್ದೇಶಕ ಹನುಮಂತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಡಿಪಿಎಂ, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ತಾಲ್ಲೂಕಿನ ಚಂದ್ರಬಂಡಾ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂಡದ ಅಧಿಕಾರಿ ಕುಮುದ್ ದುಬೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮೊದಲಿಗೆ ಚಂದ್ರಬಂಡಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಕಾಮಗಾರಿ ಕಡತ, ನೋಂದಣಿ, ಎನ್.ಎಂ.ಎ.ಎಸ್. ಹಾಜರಾತಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದರು. ಬಳಿಕ<br> ಅರಿಸಿಗೇರಾ ತಾಂಡದಲ್ಲಿರುವ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. </p><p>ನಾಗನದೊಡ್ಡ ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯದಲ್ಲಿ ಕಂದಕ ಬದು ನಿರ್ಮಾಣ, ದನದ ಕೊಟ್ಟಿಗೆ ಹಾಗೂ ಚಿಂತಲ ಕುಂಟ ಅಮೃತ ಸರೋವರ ಕೆರೆ ಕಾಮಗಾರಿಗಳನ್ನು ವೀಕ್ಷಿಸಿದರು.</p>.<p>ಚಂದ್ರಬಂಡಾಗ್ರಾಮದಲ್ಲಿರುವ ಕೀರಾಕುಂಟ ಅಮೃತ ಸರೋವರ ಕೆರೆ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು. ಬಾಯಿದೊಡ್ಡಿ ಗ್ರಾಮ ಪಂಚಾಯಿತಿಯ ಕಡಗಂದೊಡ್ಡಿ ಗ್ರಾಮದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.</p><p>ನಂತರ ಕುರಬದೊಡ್ಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರ ಎನ್.ಎಂ.ಎ.ಎಸ್. ಹಾಜರಾತಿ, ಉದ್ಯೋಗ ಚೀಟಿ ಮತ್ತು ಕೆಲಸದ ಪ್ರಮಾಣವನ್ನು ಪರಿಶೀಲಿಸಿದರು. ನಂತರ ಚಂದ್ರಬಂಡಾ ಗ್ರಾಮ ಪಂಚಾಯಿತಿಯ ಕಟ್ಲಟ್ಕೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.</p><p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ, ಸಹಾಯಕ ನಿರ್ದೇಶಕ ಹನುಮಂತ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಡಿಪಿಎಂ, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>