<p><strong>ಸಿಂಧನೂರು</strong>: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ ವಿವಿಧ ಯೋಜನೆ ಪ್ರಗತಿ ಪರಿಶೀಲನೆ ನಡೆಸಿತು.</p><p>ತಾಲ್ಲೂಕಿನ ಆರ್.ಎಚ್.ಕ್ಯಾಂಪ್, ಎಲೆಕೂಡ್ಲಿಗಿ, ಮುಕ್ಕುಂದಾ ಪಂಚಾಯಿತಿಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಸೌಲಭ್ಯಗಳ ಫಲಾನುಭವಿಗಳ ಸಮೀಕ್ಷೆಯಲ್ಲಿ ವಸತಿ ಯೋಜನೆ ಫಲಾನುಭವಿಗಳ ಜತೆ ಮಾತನಾಡಿ ಕಡತ ಪರಿಶೀಲಿಸಿದರು.</p><p>ಅಂಗವಿಕಲರು, ವಿಧವೆಯರು ಹಾಗೂ ವೃದ್ಯಾಪ್ಯ ವೇತನ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತದೆಯೋ ಇಲ್ಲವೋ ಎಂದು ಫಲಾನುಭವಿಗಳನ್ನು ಖುದ್ದಾಗಿ ಕೇಳಿ ಮಾಹಿತಿ ಪಡೆದರು.</p><p>ನರೇಗಾ ಕೂಲಿ ಕಾರ್ಮಿಕರರೊಂದಿಗೆ ಮಾತನಾಡಿ, ಅನುಕೂಲಗಳು ಮತ್ತು ಸೌಲಭ್ಯಗಳು ವಿಚಾರಣೆ ಮಾಡಿದರು.</p><p>ಉದ್ಯೋಗ ಚೀಟಿಯನ್ನು ಪರಿಶೀಲಿಸಿ ಉದ್ಯೋಗದ ಮಾಹಿತಿ ನಮೂದಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.</p><p>‘ನರೇಗಾ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಅಪಘಾತ ವಿಮೆ ₹2 ಲಕ್ಷದಿಂದ ₹5 ಲಕ್ಷದವರೆಗೆ ಹೆಚ್ಚಿಗೆ ಮಾಡಲಾಗಿದೆ’ ಎಂದು ಹೇಳಿದರು.</p><p>ಮುಕ್ಕುಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾಜಿಕ ಅರಣ್ಯೀಕರಣ ಕಾಮಗಾರಿಯನ್ನು ಪರಿಶೀಲಿಸಿ ಸಸಿ ನೆಟ್ಟು ನೀರೆರೆಲಾಯಿತು.</p><p>ಕೇಂದ್ರ ತಂಡದ ಯೋಜನಾ ನಿರ್ದೇಶಕರಾದ ರಮೇಶ ಬಾಬು, ಕೃಷ್ಣಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸಹಾಯಕ ನಿರ್ದೇಶಕ ಅಮರಗುಂಡಪ್ಪ ಸೇರಿದಂತೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ ವಿವಿಧ ಯೋಜನೆ ಪ್ರಗತಿ ಪರಿಶೀಲನೆ ನಡೆಸಿತು.</p><p>ತಾಲ್ಲೂಕಿನ ಆರ್.ಎಚ್.ಕ್ಯಾಂಪ್, ಎಲೆಕೂಡ್ಲಿಗಿ, ಮುಕ್ಕುಂದಾ ಪಂಚಾಯಿತಿಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಸೌಲಭ್ಯಗಳ ಫಲಾನುಭವಿಗಳ ಸಮೀಕ್ಷೆಯಲ್ಲಿ ವಸತಿ ಯೋಜನೆ ಫಲಾನುಭವಿಗಳ ಜತೆ ಮಾತನಾಡಿ ಕಡತ ಪರಿಶೀಲಿಸಿದರು.</p><p>ಅಂಗವಿಕಲರು, ವಿಧವೆಯರು ಹಾಗೂ ವೃದ್ಯಾಪ್ಯ ವೇತನ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತದೆಯೋ ಇಲ್ಲವೋ ಎಂದು ಫಲಾನುಭವಿಗಳನ್ನು ಖುದ್ದಾಗಿ ಕೇಳಿ ಮಾಹಿತಿ ಪಡೆದರು.</p><p>ನರೇಗಾ ಕೂಲಿ ಕಾರ್ಮಿಕರರೊಂದಿಗೆ ಮಾತನಾಡಿ, ಅನುಕೂಲಗಳು ಮತ್ತು ಸೌಲಭ್ಯಗಳು ವಿಚಾರಣೆ ಮಾಡಿದರು.</p><p>ಉದ್ಯೋಗ ಚೀಟಿಯನ್ನು ಪರಿಶೀಲಿಸಿ ಉದ್ಯೋಗದ ಮಾಹಿತಿ ನಮೂದಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.</p><p>‘ನರೇಗಾ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಅಪಘಾತ ವಿಮೆ ₹2 ಲಕ್ಷದಿಂದ ₹5 ಲಕ್ಷದವರೆಗೆ ಹೆಚ್ಚಿಗೆ ಮಾಡಲಾಗಿದೆ’ ಎಂದು ಹೇಳಿದರು.</p><p>ಮುಕ್ಕುಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾಜಿಕ ಅರಣ್ಯೀಕರಣ ಕಾಮಗಾರಿಯನ್ನು ಪರಿಶೀಲಿಸಿ ಸಸಿ ನೆಟ್ಟು ನೀರೆರೆಲಾಯಿತು.</p><p>ಕೇಂದ್ರ ತಂಡದ ಯೋಜನಾ ನಿರ್ದೇಶಕರಾದ ರಮೇಶ ಬಾಬು, ಕೃಷ್ಣಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸಹಾಯಕ ನಿರ್ದೇಶಕ ಅಮರಗುಂಡಪ್ಪ ಸೇರಿದಂತೆ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>