ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಪರೀಕ್ಷೆ: 433 ವಿದ್ಯಾರ್ಥಿಗಳು ಗೈರು

Last Updated 29 ಏಪ್ರಿಲ್ 2019, 14:41 IST
ಅಕ್ಷರ ಗಾತ್ರ

ರಾಯಚೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸೋಮವಾರ ಶಾಂತಿಯುತವಾಗಿ ನಡೆಯಿತು.

ವಿಜ್ಞಾನದಲ್ಲಿ ಪಿಯುಸಿ ದ್ವಿತೀಯ ಪರೀಕ್ಷೆ ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಬರೆದರು. 433 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದರು. ಜಿಲ್ಲೆಯಲ್ಲಿ 3,091 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕಾಗಿ ನೋಂದಣಿ ಮಾಡಿಕೊಂಡಿದ್ದರು.

ಬಾಲಯೇಸು ಸಂಯುಕ್ತ ಪಿಯು ಕಾಲೇಜು, ವಿದ್ಯಾನಿಧಿ ಪಿಯು ಕಾಲೇಜು, ಸರ್ಕಾರಿ ಬಾಲಕರ ಪಿಯು ಕಾಲೇಜು, ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ಪ್ರಮಾಣ ಪಿಯು ಕಾಲೇಜು, ಆಲ್‌ ಕರೀಂ ಮಹಿಳಾ ಪಿಯು ಕಾಲಜಿನಲ್ಲಿ ಸಿಇಟಿ ಪರೀಕ್ಷೆ ನಡೆಯಿತು.

ಮೊದಲ ದಿನ ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಏಪ್ರಿಲ್‌ 30 ರಂದು ಭೌತವಿಜ್ಞಾನ ಮತ್ತು ರಾಸಾಯನವಿಜ್ಞಾನ ವಿಷಯಗಳ ಪರೀಕ್ಷೆ ಬರೆಯುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT