ಅ. 11 ರಂದು ಮಸ್ಕಿ ಜಲಾಶಯದಿಂದ ಹೆಚ್ಚಿನ ನೀರು ಹಳ್ಳಕ್ಕೆ ಬಿಟ್ಟಿದ್ದರಿಂದ ಹಳ್ಳದಲ್ಲಿ ಸಿಲುಕಿದ್ದ ಚನ್ನಬಸವನನ್ನು ರಕ್ಷಣೆ ಮಾಡುವ ವೇಳೆ ಹಗ್ಗ ತುಂಡಾಗಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ. ತಾಲ್ಲೂಕು ಆಡಳಿತ 15 ದಿನಗಳವರೆಗೆ ಶೋಧ ನಡೆಸಿದ್ದರು. ಚನ್ನಬಸವ ಪತ್ತೆಯಾಗದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರವಾಹಕ್ಕೆ ಕೊಚ್ಚಿ ಹೋಗಿ ತಿಂಗಳ ನಂತರ ಕೊಳೆತ ದೇಹ ಪತ್ತೆಯಾಗಿದೆ.