<p><strong>ಮಸ್ಕಿ: </strong>ಮಸ್ಕಿ ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಚನ್ನಬಸವ ಮಡಿವಾಳ (36) ಅವರ ಕೊಳೆತದೇಹ ತಿಂಗಳ ನಂತರ ಶನಿವಾರ ಮಧ್ಯಾಹ್ನ ಪಟ್ಟಣದ ಹಳ್ಳದಲ್ಲಿ ಮುಳ್ಳಿನ ಪೊದೆಯಲ್ಲಿ ಪತ್ತೆಯಾಗಿದೆ.</p>.<p>ಹಳ್ಳದಲ್ಲಿನ ತುಂಗಭದ್ರಾ ಎಡದಂಡೆ ಕಾಲುವೆಯ ಸೇತುವೆ ಬಳಿ ಮೀನು ಹಿಡಿಯಲು ಹೋಗಿದ್ದ ಯುವಕರಿಗೆ ಕೊಳೆತ ದೇಹದ ವಾಸನೆ ಬಂದಿದೆ. ಕೂಡಲೇ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ಮಾಡಿದ್ದಾರೆ. ಕೂಡಲೇ ಸಬ್ ಇನ್ಸ್ಪೆಕ್ಟರ್ ಸಣ್ಣ ವೀರೇಶ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇದು ಚನ್ನಬಸವ ಮಡಿವಾಳ ಅವರ ಶವ ಎಂದು ಗುರುತಿಸಲಾಗಿದೆ ಎಂದು ವೀರೇಶ ತಿಳಿಸಿದ್ದಾರೆ.</p>.<p>ಅ. 11 ರಂದು ಮಸ್ಕಿ ಜಲಾಶಯದಿಂದ ಹೆಚ್ಚಿನ ನೀರು ಹಳ್ಳಕ್ಕೆ ಬಿಟ್ಟಿದ್ದರಿಂದ ಹಳ್ಳದಲ್ಲಿ ಸಿಲುಕಿದ್ದ ಚನ್ನಬಸವನನ್ನು ರಕ್ಷಣೆ ಮಾಡುವ ವೇಳೆ ಹಗ್ಗ ತುಂಡಾಗಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ. ತಾಲ್ಲೂಕು ಆಡಳಿತ 15 ದಿನಗಳವರೆಗೆ ಶೋಧ ನಡೆಸಿದ್ದರು. ಚನ್ನಬಸವ ಪತ್ತೆಯಾಗದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರವಾಹಕ್ಕೆ ಕೊಚ್ಚಿ ಹೋಗಿ ತಿಂಗಳ ನಂತರ ಕೊಳೆತ ದೇಹ ಪತ್ತೆಯಾಗಿದೆ.</p>.<p>ಚನ್ನಬಸವನ ಕುಟುಂಬದಲ್ಲಿ ದುಖಃ ಮಡುಗಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಮಸ್ಕಿ ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಚನ್ನಬಸವ ಮಡಿವಾಳ (36) ಅವರ ಕೊಳೆತದೇಹ ತಿಂಗಳ ನಂತರ ಶನಿವಾರ ಮಧ್ಯಾಹ್ನ ಪಟ್ಟಣದ ಹಳ್ಳದಲ್ಲಿ ಮುಳ್ಳಿನ ಪೊದೆಯಲ್ಲಿ ಪತ್ತೆಯಾಗಿದೆ.</p>.<p>ಹಳ್ಳದಲ್ಲಿನ ತುಂಗಭದ್ರಾ ಎಡದಂಡೆ ಕಾಲುವೆಯ ಸೇತುವೆ ಬಳಿ ಮೀನು ಹಿಡಿಯಲು ಹೋಗಿದ್ದ ಯುವಕರಿಗೆ ಕೊಳೆತ ದೇಹದ ವಾಸನೆ ಬಂದಿದೆ. ಕೂಡಲೇ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ಮಾಡಿದ್ದಾರೆ. ಕೂಡಲೇ ಸಬ್ ಇನ್ಸ್ಪೆಕ್ಟರ್ ಸಣ್ಣ ವೀರೇಶ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇದು ಚನ್ನಬಸವ ಮಡಿವಾಳ ಅವರ ಶವ ಎಂದು ಗುರುತಿಸಲಾಗಿದೆ ಎಂದು ವೀರೇಶ ತಿಳಿಸಿದ್ದಾರೆ.</p>.<p>ಅ. 11 ರಂದು ಮಸ್ಕಿ ಜಲಾಶಯದಿಂದ ಹೆಚ್ಚಿನ ನೀರು ಹಳ್ಳಕ್ಕೆ ಬಿಟ್ಟಿದ್ದರಿಂದ ಹಳ್ಳದಲ್ಲಿ ಸಿಲುಕಿದ್ದ ಚನ್ನಬಸವನನ್ನು ರಕ್ಷಣೆ ಮಾಡುವ ವೇಳೆ ಹಗ್ಗ ತುಂಡಾಗಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ. ತಾಲ್ಲೂಕು ಆಡಳಿತ 15 ದಿನಗಳವರೆಗೆ ಶೋಧ ನಡೆಸಿದ್ದರು. ಚನ್ನಬಸವ ಪತ್ತೆಯಾಗದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರವಾಹಕ್ಕೆ ಕೊಚ್ಚಿ ಹೋಗಿ ತಿಂಗಳ ನಂತರ ಕೊಳೆತ ದೇಹ ಪತ್ತೆಯಾಗಿದೆ.</p>.<p>ಚನ್ನಬಸವನ ಕುಟುಂಬದಲ್ಲಿ ದುಖಃ ಮಡುಗಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>