<p><strong>ಲಿಂಗಸುಗೂರು:</strong> ‘ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ವಸತಿ ನಿಲಯಗಳನ್ನು ನಿರ್ವಹಣೆ ಮಾಡುತ್ತಿಲ್ಲ. ಪರಿಶಿಷ್ಟರಿಗೆ ಸೌಲಭ್ಯಗಳನ್ನು ತಲುಪಿಸುತ್ತಿಲ್ಲ. ಇಲಾಖೆ ಅವ್ಯವಸ್ಥೆಯ ಆಗರವಾಗಿದೆ’ ಎಂದು ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಮರಳಿ ಆರೋಪಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪರಿಶಿಷ್ಟರ ಕಲ್ಯಾಣ ಹಾಗೂ ವಸತಿ ನಿಲಯಗಳ ನಿರ್ವಹಣೆಗೆ ಇಲಾ ಖೆಗೆ ಕೋಟ್ಯಂತರ ರೂಪಾಯಿ ಹಣ ಬರುತ್ತಿದೆ. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ, ಗುಣಮಟ್ಟದ ಊಟ ನೀಡ ದೆ ಅಧಿಕಾರಿಗಳು ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.</p>.<p>‘ವಸತಿ ನಿಲಯಗಳ ಮೇಲ್ವಿಚಾರಕರು ಕೇಂದ್ರ ಸ್ಥಳದಲ್ಲಿ ಮನೆ ಮಾಡದೆ ದೂರದ ಪಟ್ಟಣಗಳಲ್ಲಿ ಮನೆ ಮಾಡಿದ್ದಾರೆ. ವಸತಿ ನಿಲಯಗಳಿಗೆ ಭೇಟಿ ನೀಡುತ್ತಿಲ್ಲ’ ಎಂದು ಆಪಾದಿಸಿದರು.</p>.<p>‘2020ರಲ್ಲಿ ಶಿರಡಿ ಸಾಯಿ ಎಂಬ ಸಂಸ್ಥೆಗೆ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆಗೆ ಟೆಂಡರ್ ನೀಡಲಾಗಿತ್ತು. ಅಂದಿನ ದರ ಪರಿಶೀಲಿಸಿದರೆ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಕಡಿಮೆ ಇದೆ. ಇಷ್ಟೊಂದು ಕಡಿಮೆ ದರದಲ್ಲಿ ಆಹಾರ ಪದಾರ್ಥ ಪೂರೈಕೆ ಹೇಗೆ ಸಾಧ್ಯ?. ಈ ಕುರಿತು ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ‘ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ವಸತಿ ನಿಲಯಗಳನ್ನು ನಿರ್ವಹಣೆ ಮಾಡುತ್ತಿಲ್ಲ. ಪರಿಶಿಷ್ಟರಿಗೆ ಸೌಲಭ್ಯಗಳನ್ನು ತಲುಪಿಸುತ್ತಿಲ್ಲ. ಇಲಾಖೆ ಅವ್ಯವಸ್ಥೆಯ ಆಗರವಾಗಿದೆ’ ಎಂದು ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಮರಳಿ ಆರೋಪಿಸಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪರಿಶಿಷ್ಟರ ಕಲ್ಯಾಣ ಹಾಗೂ ವಸತಿ ನಿಲಯಗಳ ನಿರ್ವಹಣೆಗೆ ಇಲಾ ಖೆಗೆ ಕೋಟ್ಯಂತರ ರೂಪಾಯಿ ಹಣ ಬರುತ್ತಿದೆ. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ, ಗುಣಮಟ್ಟದ ಊಟ ನೀಡ ದೆ ಅಧಿಕಾರಿಗಳು ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.</p>.<p>‘ವಸತಿ ನಿಲಯಗಳ ಮೇಲ್ವಿಚಾರಕರು ಕೇಂದ್ರ ಸ್ಥಳದಲ್ಲಿ ಮನೆ ಮಾಡದೆ ದೂರದ ಪಟ್ಟಣಗಳಲ್ಲಿ ಮನೆ ಮಾಡಿದ್ದಾರೆ. ವಸತಿ ನಿಲಯಗಳಿಗೆ ಭೇಟಿ ನೀಡುತ್ತಿಲ್ಲ’ ಎಂದು ಆಪಾದಿಸಿದರು.</p>.<p>‘2020ರಲ್ಲಿ ಶಿರಡಿ ಸಾಯಿ ಎಂಬ ಸಂಸ್ಥೆಗೆ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆಗೆ ಟೆಂಡರ್ ನೀಡಲಾಗಿತ್ತು. ಅಂದಿನ ದರ ಪರಿಶೀಲಿಸಿದರೆ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಕಡಿಮೆ ಇದೆ. ಇಷ್ಟೊಂದು ಕಡಿಮೆ ದರದಲ್ಲಿ ಆಹಾರ ಪದಾರ್ಥ ಪೂರೈಕೆ ಹೇಗೆ ಸಾಧ್ಯ?. ಈ ಕುರಿತು ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>