ವರ್ಗಾವಣೆಗೆ ನಿಖರ ಕಾರಣ ಗೊತ್ತಾಗಿಲ್ಲ. ಜಿಲ್ಲೆಗೆ ಬರುತ್ತಿದ್ದಂತೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಿದ್ದ ಅವರು, ಶೇ 38 ರಷ್ಟಿದ್ದ ಲಸಿಕಾಕರಣ ಶೇ 60 ಕ್ಕೆ ಏರಿಕೆ ಆಗುವುದಕ್ಕೆ ಶ್ರಮಿಸಿದ್ದರು. ಜಿಲ್ಲೆಯಾದ್ಯಂತ ಸಂಚರಿಸಿ ಕಾರ್ಯನಿರ್ವಹಿಸುತ್ತಿದ್ದ ಅವರು ಸರಳತೆ ಹಾಗೂ ಜನರೊಂದಿಗೆ ಒಡನಾಟದಿಂದ ಗಮನ ಸೆಳೆದಿದ್ದರು.