ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ಜಿಲ್ಲೆಗೆ ಚಾರುಲತಾ ನೂತನ ಜಿಲ್ಲಾಧಿಕಾರಿ

Last Updated 11 ಅಕ್ಟೋಬರ್ 2021, 16:04 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್‌ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.

2012 ನೇ ಸಾಲಿನ ಐಎಎಸ್‌ ಅಧಿಕಾರಿಯಾಗಿದ್ದು, ಈ ಮೊದಲು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಳೆದ ಜನವರಿಯಿಂದ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಮಹಾರಾಷ್ಟ್ರದವರು.

ಮೂರು ತಿಂಗಳೊಳಗೆ ವರ್ಗಾವಣೆ: ರಾಯಚೂರು ಜಿಲ್ಲೆಗೆ ಕಳೆದ ಜುಲೈ 23 ರಂದು ಮೊದಲಬಾರಿಗೆ ಜಿಲ್ಲಾಧಿಕಾರಿಯಾಗಿ ಬಂದಿದ್ದ ಡಾ.ಸತೀಶ್‌ ಬಿ.ಸಿ. ಅವರನ್ನು ಎರಡು ತಿಂಗಳು 17 ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಗೆ ನಿಖರ ಕಾರಣ ಗೊತ್ತಾಗಿಲ್ಲ. ಜಿಲ್ಲೆಗೆ ಬರುತ್ತಿದ್ದಂತೆ ಕೋವಿಡ್‌ ಲಸಿಕೆ ಅಭಿಯಾನ ಆರಂಭಿಸಿದ್ದ ಅವರು, ಶೇ 38 ರಷ್ಟಿದ್ದ ಲಸಿಕಾಕರಣ ಶೇ 60 ಕ್ಕೆ ಏರಿಕೆ ಆಗುವುದಕ್ಕೆ ಶ್ರಮಿಸಿದ್ದರು. ಜಿಲ್ಲೆಯಾದ್ಯಂತ ಸಂಚರಿಸಿ ಕಾರ್ಯನಿರ್ವಹಿಸುತ್ತಿದ್ದ ಅವರು ಸರಳತೆ ಹಾಗೂ ಜನರೊಂದಿಗೆ ಒಡನಾಟದಿಂದ ಗಮನ ಸೆಳೆದಿದ್ದರು.

ರಾಜ್ಯ ಸರ್ಕಾರವು ದಿಢೀರ್‌ ಅವರನ್ನು ಕೊಡಗು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT