7 ವರ್ಷಗಳ ಅವಧಿಯಲ್ಲಿ ಅಪಘಾತ ರಹಿತ ಮೋಟಾರು ವಾಹನ ಚಾಲನಾ ಸೇವೆಗಾಗಿ 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ನಡೆದ ಚಾಲಕರ ದಿನದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ಅಪಘಾತ ರಹಿತ ವಾಹನ ಚಾಲನೆಗಾಗಿ ಈ ಹಿಂದೆ ಯಲ್ಲಪ್ಪ ಸಾನಬಾಳ ಅವರು ಬೆಳ್ಳಿ ಪದಕವನ್ನು ಪಡೆದಿದ್ದರು. 2007 ರಿಂದ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.