<p><strong>ರಾಯಚೂರು</strong>: ಬಾಲಕಿಯನ್ನು ವಿವಾಹವಾಗಿದ್ದ ಆರೋಪದ ಮೇರೆಗೆ ಇಲ್ಲಿನ ಶಕ್ತಿ ನಗರದ ತಾತಪ್ಪ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ರಾಯಚೂರು ಸಮೀಪದ ಗುರ್ಜಾಪುರ ಸೇತುವೆ ಬಳಿ ಇತ್ತೀಚೆಗೆ ತಾತಪ್ಪ ಕೃಷ್ಣಾ ನದಿಯಲ್ಲಿ ಬಿದ್ದಿದ್ದ ಘಟನೆ ನಡೆದಿತ್ತು. ನಂತರ ತಾತಪ್ಪ ಬಾಲ್ಯವಿವಾಹವಾಗಿದ್ದು ಗೊತ್ತಾಗಿತ್ತು.</p>.<p>ತಾತಪ್ಪ ನದಿಗೆ ಬಿದ್ದಿದ್ದ ವಿಷಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡಿತ್ತು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬಾಲ್ಯವಿವಾಹದ ಸಂಶಯ ವ್ಯಕ್ತಪಡಿಸಿ, ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿತ್ತು.</p>.<p>ಆಯೋಗದ ಸೂಚನೆಯಂತೆ ಅಪ್ರಾಪ್ತೆ ಓದಿರುವ ಶಾಲಾ ದಾಖಲಾತಿ ಪರಿಶೀಲನೆ ಮಾಡಿದಾಗ ತಾತಪ್ಪ ಬಾಲ್ಯವಿವಾಹವಾಗಿದ್ದು ಬಹಿರಂಗವಾಗಿತ್ತು.</p>.<p>ಆಯೋಗದ ಸದಸ್ಯ ಶಶಿಧರ ಕೋಸಂಬೆ, ಘಟನೆ ಹಿನ್ನೆಲೆ ಆಧರಿಸಿ ಪೋಕ್ಸೊ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಯಾದಗಿರಿ ಹಾಗೂ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಬಾಲಕಿಯನ್ನು ವಿವಾಹವಾಗಿದ್ದ ಆರೋಪದ ಮೇರೆಗೆ ಇಲ್ಲಿನ ಶಕ್ತಿ ನಗರದ ತಾತಪ್ಪ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ರಾಯಚೂರು ಸಮೀಪದ ಗುರ್ಜಾಪುರ ಸೇತುವೆ ಬಳಿ ಇತ್ತೀಚೆಗೆ ತಾತಪ್ಪ ಕೃಷ್ಣಾ ನದಿಯಲ್ಲಿ ಬಿದ್ದಿದ್ದ ಘಟನೆ ನಡೆದಿತ್ತು. ನಂತರ ತಾತಪ್ಪ ಬಾಲ್ಯವಿವಾಹವಾಗಿದ್ದು ಗೊತ್ತಾಗಿತ್ತು.</p>.<p>ತಾತಪ್ಪ ನದಿಗೆ ಬಿದ್ದಿದ್ದ ವಿಷಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡಿತ್ತು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬಾಲ್ಯವಿವಾಹದ ಸಂಶಯ ವ್ಯಕ್ತಪಡಿಸಿ, ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿತ್ತು.</p>.<p>ಆಯೋಗದ ಸೂಚನೆಯಂತೆ ಅಪ್ರಾಪ್ತೆ ಓದಿರುವ ಶಾಲಾ ದಾಖಲಾತಿ ಪರಿಶೀಲನೆ ಮಾಡಿದಾಗ ತಾತಪ್ಪ ಬಾಲ್ಯವಿವಾಹವಾಗಿದ್ದು ಬಹಿರಂಗವಾಗಿತ್ತು.</p>.<p>ಆಯೋಗದ ಸದಸ್ಯ ಶಶಿಧರ ಕೋಸಂಬೆ, ಘಟನೆ ಹಿನ್ನೆಲೆ ಆಧರಿಸಿ ಪೋಕ್ಸೊ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಯಾದಗಿರಿ ಹಾಗೂ ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>