<p><strong>ಶಕ್ತಿನಗರ: </strong>‘ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವಲ್ಲಿ ಮಕ್ಕಳ ಗ್ರಾಮ ಸಭೆಗಳು ನಿರ್ಣಾಯಕ ಪಾತ್ರ ವಹಿಸುತ್ತವೆ’ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸುರೇಶ ಅಭಿಪ್ರಾಯಪಟ್ಟರು.</p>.<p>ಡಿ.ಯದ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಸಮಸ್ಯೆಗಳನ್ನು ನೇರವಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಜತೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲು ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಗ್ರಾಮಸಭೆ ವೇದಿಕೆಯಾಗಿದೆ. ಹಕ್ಕುಗಳ ಕುರಿತು ಅವರಿಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆಯ ಅಧಿಕಾರಿ ಸುಮಾ, ಡಿ.ಯದ್ಲಾಪುರ ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಚನ್ನಮ್ಮ, ಶಕ್ತಿನಗರ ಠಾಣೆ ಎಎಸ್ಐ ತಿಪ್ಪಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ವಸಂತ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ ದೊಡ್ಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ: </strong>‘ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವಲ್ಲಿ ಮಕ್ಕಳ ಗ್ರಾಮ ಸಭೆಗಳು ನಿರ್ಣಾಯಕ ಪಾತ್ರ ವಹಿಸುತ್ತವೆ’ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸುರೇಶ ಅಭಿಪ್ರಾಯಪಟ್ಟರು.</p>.<p>ಡಿ.ಯದ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳ ಸಮಸ್ಯೆಗಳನ್ನು ನೇರವಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಜತೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲು ಹಾಗೂ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಗ್ರಾಮಸಭೆ ವೇದಿಕೆಯಾಗಿದೆ. ಹಕ್ಕುಗಳ ಕುರಿತು ಅವರಿಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆಯ ಅಧಿಕಾರಿ ಸುಮಾ, ಡಿ.ಯದ್ಲಾಪುರ ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಚನ್ನಮ್ಮ, ಶಕ್ತಿನಗರ ಠಾಣೆ ಎಎಸ್ಐ ತಿಪ್ಪಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ವಸಂತ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಹಾಂತೇಶ ದೊಡ್ಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>