<p><strong>ಕವಿತಾಳ:</strong> ‘ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಸಮೀಪದ ಹಾಲಾಪುರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಒಂದು ಉತ್ತಮ ಅವಕಾಶ. ಅದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು’ ಎಂದು ಹೇಳಿದರು.</p>.<p>ಭರತ ನಾಟ್ಯ, ಭಕ್ತಿಗೀತೆ, ರಸ ಪ್ರಶ್ನೆ, ರಂಗೋಲಿ ಬಿಡಿಸುವುದು, ಛದ್ಮವೇಶ, ಚಿತ್ರಕಲೆ, ಕಥೆ ಹೇಳುವುದು, ಮಿಮಿಕ್ರಿ, ಪ್ರಬಂಧ ರಚನೆ, ಭಾವಗೀತೆ ಸೇರಿದಂತೆ ವಿವಿಧ ಚಟವಟಿಕೆಗಳಲ್ಲಿ ಭಾಗವಹಿಸಿದ್ದ ಮಕ್ಕಳು ಸಂಭ್ರಮಿಸಿದರು.</p>.<p>ಚಂದ್ರಮೌಳೇಶ್ವರ ತಾತ ಮತ್ತು ದಂಡಗುಂಡಪ್ಪ ತಾತ ಜಂಗಮರಹಳ್ಳಿ ಸಾನ್ನಿಧ್ಯ ವಹಿಸಿದ್ದರು.</p>.<p>ಮುಖಂಡರಾದ ವೆಂಕಟರಡ್ಡಿಗೌಡ, ಪಂಪಾಪತಿ ಹೂಗಾರ, ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಬಲವಂತರಾಯ ಗೌಡ, ಕರಿಯಪ್ಪ ಹಾಲಾಪುರು, ಜಗಧೀಶ್ಚಂದ್ರ ಸ್ವಾಮಿ, ಕರಿಯಪ್ಪ ಬೆಂಗಳೂರು, ಮೈಬುಬ್ ಸಾಬ್, ಮಂಜುನಾಥ ಪಾಟೀಲ, ಪ್ರಶಾಂತಕುಮಾರ ಪಾಟೀಲ, ಚನ್ನವಿರ ಜೋತನ, ಅರವಿಂದ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ‘ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಸಮೀಪದ ಹಾಲಾಪುರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಒಂದು ಉತ್ತಮ ಅವಕಾಶ. ಅದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು’ ಎಂದು ಹೇಳಿದರು.</p>.<p>ಭರತ ನಾಟ್ಯ, ಭಕ್ತಿಗೀತೆ, ರಸ ಪ್ರಶ್ನೆ, ರಂಗೋಲಿ ಬಿಡಿಸುವುದು, ಛದ್ಮವೇಶ, ಚಿತ್ರಕಲೆ, ಕಥೆ ಹೇಳುವುದು, ಮಿಮಿಕ್ರಿ, ಪ್ರಬಂಧ ರಚನೆ, ಭಾವಗೀತೆ ಸೇರಿದಂತೆ ವಿವಿಧ ಚಟವಟಿಕೆಗಳಲ್ಲಿ ಭಾಗವಹಿಸಿದ್ದ ಮಕ್ಕಳು ಸಂಭ್ರಮಿಸಿದರು.</p>.<p>ಚಂದ್ರಮೌಳೇಶ್ವರ ತಾತ ಮತ್ತು ದಂಡಗುಂಡಪ್ಪ ತಾತ ಜಂಗಮರಹಳ್ಳಿ ಸಾನ್ನಿಧ್ಯ ವಹಿಸಿದ್ದರು.</p>.<p>ಮುಖಂಡರಾದ ವೆಂಕಟರಡ್ಡಿಗೌಡ, ಪಂಪಾಪತಿ ಹೂಗಾರ, ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಬಲವಂತರಾಯ ಗೌಡ, ಕರಿಯಪ್ಪ ಹಾಲಾಪುರು, ಜಗಧೀಶ್ಚಂದ್ರ ಸ್ವಾಮಿ, ಕರಿಯಪ್ಪ ಬೆಂಗಳೂರು, ಮೈಬುಬ್ ಸಾಬ್, ಮಂಜುನಾಥ ಪಾಟೀಲ, ಪ್ರಶಾಂತಕುಮಾರ ಪಾಟೀಲ, ಚನ್ನವಿರ ಜೋತನ, ಅರವಿಂದ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>