<p><strong>ರಾಯಚೂರು</strong>: ಜಿಲ್ಲೆಯಾದ್ಯಂತ ಶುಕ್ರವಾರ ಸರ್ಕಾರಿ ಪ್ರಾಥಮಿಕ ಶಾಲೆಗಳು ಪುನರಾರಂಭವಾದವು. ಮಕ್ಕಳಿಗೆ ಪುಷ್ಪವೃಷ್ಟಿಯ ಸ್ವಾಗತ ನೀಡಲಾಯಿತು.</p>.<p>ಜಿಲ್ಲೆಯ ಬಹುತೇಕ ಎಲ್ಲ ಗ್ರಾಮಗಳಲ್ಲಿ ಡಂಗೂರ ಬಾರಿಸಿ ಮಕ್ಕಳಿಗೆ ಹಾಗೂ ಪಾಲಕರಿಗೆ ಮಾಹಿತಿ ಕೊಡಲಾಗಿತ್ತು. ಹೀಗಾಗಿ ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಶಾಲೆ ಪ್ರವೇಶದ್ವಾರದಲ್ಲಿ ಶಾಲಾ ಪ್ರಾರಂಭೋತ್ಸವದ ಬ್ಯಾನರ್ ಅಳವಡಿಸಿದ್ದರು.</p>.<p>ಶಾಲೆ ಆರಂಭೋತ್ಸವದ ನಿಮಿತ್ತ ಎಲ್ಲ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿದ್ದು, ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ಹೂಮಳೆ ಗರೆದು ಶಾಲೆಯ ಶಿಕ್ಷಕರು, ಸಿಬ್ಬಂದಿ ಸ್ವಾಗತಿಸಿದರು.</p>.<p>ಶಾಲಾ ಆವರಣದಲ್ಲಿ ಸರಸ್ವತಿ ಮೂರ್ತಿಗೆ ಪೂಜೆ ಸಲ್ಲಿಸಿ, ನಾಡಗೀತೆ ಹಾಡಿದರು. ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಗುಲಾಬಿ ಹೂವು ಕೊಟ್ಟು ಸ್ವಾಗತಿಸಲಾಯಿತು. ಇನ್ನು ಕೆಲವು ಶಾಲೆಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮಕ್ಕಳಿಗೆ ಬಿಸ್ಕತ್ ಹಂಚಲಾಯಿತು. ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಸಿಗೆ ನೀರೆರೆದು ಶ್ರಮದಾನ ಮಾಡಿದರು. ನಂತರ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕಗಳನ್ನು ವಿತರಿಸಲಾಯಿತು.</p>.<p>ರಾಯಚೂರಿನ ಯಕ್ಲಾಸಪುರ ಶಾಲೆಯ ಆವರಣದಲ್ಲಿ ಪೆಂಡಾಲ್ ಹಾಕಲಾಗಿತ್ತು. ಪ್ರವೇಶ ದ್ವಾರದಲ್ಲಿಯೇ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ರಸ್ತೆಯ ಎರಡೂ ಬದಿಗೆ ನಿಂತು ಮಕ್ಕಳು ಬಂದ ತಕ್ಷಣ ಅವರ ಮೇಲೆ ಹೂಮಳೆ ಗರೆದರು. ಮಕ್ಕಳು ಖುಷಿಯಲ್ಲೇ ಶಾಲಾ ಆವರಣ ಪ್ರವೇಶಿಸಿದರು.</p>.<p>ಒಂದು ವಾರದಿಂದ ಮಳೆ ಸುರಿಯುತ್ತಿರುವುದರಿಂದ ಈ ಶಾಲೆಯಲ್ಲಿ ಮಕ್ಕಳಿಗೆ ಮೊದಲ ದಿನ ಕಾಸಿ ಆರಿಸಿದ ಬೆಚ್ಚಗಿನ ನೀರು ಕೊಡಲಾಯಿತು. ವಾತಾವರಣ ಬದಲಾವಣೆಯಿಂದ ಕೆಲವು ಕಡೆ ಜ್ವರ ಕಾಣಿಸಿಕೊಂಡಿದೆ. ಕಾಸಿ ಆರಿಸಿದ ನೀರು ಕುಡಿಯುವಂತೆ ಮಕ್ಕಳಿಗೆ ತಿಳಿವಳಿಕೆ ನೀಡಲಾಯಿತು.</p>.<p>ಮೊದಲ ದಿನವೇ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಬಂದದ್ದು ವಿಶೇಷವಾಗಿತ್ತು. ಬೆಳಿಗ್ಗೆಯಿಂದಲೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಬಿಟ್ಟು ಹೋಗುತ್ತಿದ್ದ ದೃಶ್ಯ ಕಂಡುಬಂತು. ರಜೆಯ ನಂತರ ಮಕ್ಕಳು ಮತ್ತು ಶಿಕ್ಷಕರ ಭೇಟಿ, ಇಬ್ಬರಲ್ಲೂ ಉತ್ಸಾಹವನ್ನು ಇಮ್ಮಡಿಗೊಳಿಸಿತ್ತು.</p>.<p>‘ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ಎಲ್ಲ ಪಠ್ಯ ಪುಸ್ತಕಗಳನ್ನು ನೇರವಾಗಿಯೇ ಬಿಇಒ ಕಚೇರಿಗಳಿಗೆ ಕಳಿಸಿಕೊಟ್ಟಿತ್ತು. ಬಿಇಒಗಳ ಮುಂಚಿತವಾಗಿಯೇ ತಾಲ್ಲೂಕು ಮಟ್ಟದಲ್ಲಿ ಮುಖ್ಯ ಶಿಕ್ಷಕರ ಸಭೆ ಕರೆದು ಪಠ್ಯ ಪುಸ್ತಕ ವಿತರಣೆ ಮಾಡಿದ್ದರು. ಹೀಗಾಗಿ ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ ತಿಳಿಸಿದರು.</p>.<p>‘ರಾಯಚೂರು ತಾಲ್ಲೂಕಿನಲ್ಲಿ 313 ಕಿರಿಯ ಪ್ರಾಥಮಿಕ, 250 ಹಿರಿಯ ಪ್ರಾಥಮಿಕ ಹಾಗೂ 54 ಪ್ರೌಢಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಉಳಿದ ತಾಲ್ಲೂಕಿನಲ್ಲೂ ಮೊದಲ ದಿನವೇ ಮಕ್ಕಳಿಗೆ ಪುಸ್ತಕ ಕೊಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಾದ್ಯಂತ ಶುಕ್ರವಾರ ಸರ್ಕಾರಿ ಪ್ರಾಥಮಿಕ ಶಾಲೆಗಳು ಪುನರಾರಂಭವಾದವು. ಮಕ್ಕಳಿಗೆ ಪುಷ್ಪವೃಷ್ಟಿಯ ಸ್ವಾಗತ ನೀಡಲಾಯಿತು.</p>.<p>ಜಿಲ್ಲೆಯ ಬಹುತೇಕ ಎಲ್ಲ ಗ್ರಾಮಗಳಲ್ಲಿ ಡಂಗೂರ ಬಾರಿಸಿ ಮಕ್ಕಳಿಗೆ ಹಾಗೂ ಪಾಲಕರಿಗೆ ಮಾಹಿತಿ ಕೊಡಲಾಗಿತ್ತು. ಹೀಗಾಗಿ ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಶಾಲೆ ಪ್ರವೇಶದ್ವಾರದಲ್ಲಿ ಶಾಲಾ ಪ್ರಾರಂಭೋತ್ಸವದ ಬ್ಯಾನರ್ ಅಳವಡಿಸಿದ್ದರು.</p>.<p>ಶಾಲೆ ಆರಂಭೋತ್ಸವದ ನಿಮಿತ್ತ ಎಲ್ಲ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿದ್ದು, ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳ ಮೇಲೆ ಹೂಮಳೆ ಗರೆದು ಶಾಲೆಯ ಶಿಕ್ಷಕರು, ಸಿಬ್ಬಂದಿ ಸ್ವಾಗತಿಸಿದರು.</p>.<p>ಶಾಲಾ ಆವರಣದಲ್ಲಿ ಸರಸ್ವತಿ ಮೂರ್ತಿಗೆ ಪೂಜೆ ಸಲ್ಲಿಸಿ, ನಾಡಗೀತೆ ಹಾಡಿದರು. ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಗುಲಾಬಿ ಹೂವು ಕೊಟ್ಟು ಸ್ವಾಗತಿಸಲಾಯಿತು. ಇನ್ನು ಕೆಲವು ಶಾಲೆಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮಕ್ಕಳಿಗೆ ಬಿಸ್ಕತ್ ಹಂಚಲಾಯಿತು. ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಸಿಗೆ ನೀರೆರೆದು ಶ್ರಮದಾನ ಮಾಡಿದರು. ನಂತರ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕಗಳನ್ನು ವಿತರಿಸಲಾಯಿತು.</p>.<p>ರಾಯಚೂರಿನ ಯಕ್ಲಾಸಪುರ ಶಾಲೆಯ ಆವರಣದಲ್ಲಿ ಪೆಂಡಾಲ್ ಹಾಕಲಾಗಿತ್ತು. ಪ್ರವೇಶ ದ್ವಾರದಲ್ಲಿಯೇ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ರಸ್ತೆಯ ಎರಡೂ ಬದಿಗೆ ನಿಂತು ಮಕ್ಕಳು ಬಂದ ತಕ್ಷಣ ಅವರ ಮೇಲೆ ಹೂಮಳೆ ಗರೆದರು. ಮಕ್ಕಳು ಖುಷಿಯಲ್ಲೇ ಶಾಲಾ ಆವರಣ ಪ್ರವೇಶಿಸಿದರು.</p>.<p>ಒಂದು ವಾರದಿಂದ ಮಳೆ ಸುರಿಯುತ್ತಿರುವುದರಿಂದ ಈ ಶಾಲೆಯಲ್ಲಿ ಮಕ್ಕಳಿಗೆ ಮೊದಲ ದಿನ ಕಾಸಿ ಆರಿಸಿದ ಬೆಚ್ಚಗಿನ ನೀರು ಕೊಡಲಾಯಿತು. ವಾತಾವರಣ ಬದಲಾವಣೆಯಿಂದ ಕೆಲವು ಕಡೆ ಜ್ವರ ಕಾಣಿಸಿಕೊಂಡಿದೆ. ಕಾಸಿ ಆರಿಸಿದ ನೀರು ಕುಡಿಯುವಂತೆ ಮಕ್ಕಳಿಗೆ ತಿಳಿವಳಿಕೆ ನೀಡಲಾಯಿತು.</p>.<p>ಮೊದಲ ದಿನವೇ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಬಂದದ್ದು ವಿಶೇಷವಾಗಿತ್ತು. ಬೆಳಿಗ್ಗೆಯಿಂದಲೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದು ಬಿಟ್ಟು ಹೋಗುತ್ತಿದ್ದ ದೃಶ್ಯ ಕಂಡುಬಂತು. ರಜೆಯ ನಂತರ ಮಕ್ಕಳು ಮತ್ತು ಶಿಕ್ಷಕರ ಭೇಟಿ, ಇಬ್ಬರಲ್ಲೂ ಉತ್ಸಾಹವನ್ನು ಇಮ್ಮಡಿಗೊಳಿಸಿತ್ತು.</p>.<p>‘ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ಎಲ್ಲ ಪಠ್ಯ ಪುಸ್ತಕಗಳನ್ನು ನೇರವಾಗಿಯೇ ಬಿಇಒ ಕಚೇರಿಗಳಿಗೆ ಕಳಿಸಿಕೊಟ್ಟಿತ್ತು. ಬಿಇಒಗಳ ಮುಂಚಿತವಾಗಿಯೇ ತಾಲ್ಲೂಕು ಮಟ್ಟದಲ್ಲಿ ಮುಖ್ಯ ಶಿಕ್ಷಕರ ಸಭೆ ಕರೆದು ಪಠ್ಯ ಪುಸ್ತಕ ವಿತರಣೆ ಮಾಡಿದ್ದರು. ಹೀಗಾಗಿ ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ ತಿಳಿಸಿದರು.</p>.<p>‘ರಾಯಚೂರು ತಾಲ್ಲೂಕಿನಲ್ಲಿ 313 ಕಿರಿಯ ಪ್ರಾಥಮಿಕ, 250 ಹಿರಿಯ ಪ್ರಾಥಮಿಕ ಹಾಗೂ 54 ಪ್ರೌಢಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಉಳಿದ ತಾಲ್ಲೂಕಿನಲ್ಲೂ ಮೊದಲ ದಿನವೇ ಮಕ್ಕಳಿಗೆ ಪುಸ್ತಕ ಕೊಡಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>