<p><strong>ರಾಯಚೂರು:</strong> ನಗರದ ಮೆಥೋಡಿಸ್ಟ್ ಚರ್ಚ್ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲಾ ಚರ್ಚ್ಗಳಲ್ಲಿ ಕ್ರೈಸ್ತ ಧರ್ಮೀಯರು ಕ್ರಿಸ್ಮಸ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.</p>.<p>ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ, ಧರ್ಮಗುರುಗಳಿಂದ ಹಬ್ಬದ ಸಂದೇಶ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಶಾಸಕ ಶಿವರಾಜ ಪಾಟೀಲ ಮತ್ತಿತರ ಗಣ್ಯರು ನಗರದ ಮೆಥೋಡಿಸ್ಟ್ ಚರ್ಚ್ನಲ್ಲಿ ಕ್ರಿಸ್ ಮಸ್ ಹಬ್ಬದ ಅಂಗವಾಗಿ ಕೇಕ್ ಕತ್ತರಿಸುವ ಮೂಲಕ ಕ್ರಿಸ್ಮಸ್ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು.</p>.<p>ಶಾಸಕ ಶಿವರಾಜ ಪಾಟೀಲ,‘ಅತ್ಯಂತ ಹಿಂದಿನಕಾಲದಿಂದಲೂ ರಾಯಚೂರು ನಗರದಲ್ಲಿ ವಾಸಿಸುತ್ತಿರುವ ಕ್ರೈಸ್ತ ಸಮುದಾಯ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರ ಏಳಿಗೆಗೆ ಶ್ರಮಿಸುತ್ತಿರುವದು ಶ್ಲಾಘನೀಯ’ ಎಂದರು.</p>.<p>‘ಕ್ರೈಸ್ತ ಸಮುದಾಯ ಬಡವರಿಗೆ ಶಿಕ್ಷಣ, ಆರೋಗ್ಯ ಸೇವೆ ನೀಡುವ ಮೂಲಕ ಸಮಾಜದಲ್ಲಿ ಸೇವಾ ಮನೋಭಾವವುಳ್ಳ ಸಮುದಾಯವಾಗಿದೆ. ಸಮಾಜದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯವನ್ನು ಮಾಡಲು ಎಲ್ಲಾ ರೀತಿಯ ಸಹಕಾರವನ್ನು ನೀಡುವೆ’ ಎಂದರು.</p>.<p>ಮುಖಂಡರಾದ ಕಡಗೋಲ ಆಂಜನೇಯ, ವೈ.ಗೋಪಾಲರೆಡ್ಡಿ, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷ್ಮೀ, ಸ್ಟೀವನ್ ಬಿನ್ನಿ ಸೇರಿದಂತೆ ಚರ್ಚ್ನ ಧರ್ಮಗುರುಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.</p>.<p>ಶಕ್ತಿ ನಗರ ವರದಿ: ತಾಲ್ಲೂಕಿನ ಶಕ್ತಿನಗರದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಶಾಸಕ ಬಸನಗೌಡ ದದ್ದಲ ಮತ್ತಿತರ ಗಣ್ಯರು ವಿವಿಧ ಚರ್ಚ್ಗಳಿಗೆ ಭೇಟಿ ನೀಡಿ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸಿದರು.</p>.<p>ಮೊದಲಿಗೆ ಕ್ಯಾಥೊಲಿಕ್ ಚರ್ಚ್ನಲ್ಲಿ ಧರ್ಮಗುರು ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಗರದ ಮೆಥೋಡಿಸ್ಟ್ ಚರ್ಚ್ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲಾ ಚರ್ಚ್ಗಳಲ್ಲಿ ಕ್ರೈಸ್ತ ಧರ್ಮೀಯರು ಕ್ರಿಸ್ಮಸ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.</p>.<p>ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ, ಧರ್ಮಗುರುಗಳಿಂದ ಹಬ್ಬದ ಸಂದೇಶ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಶಾಸಕ ಶಿವರಾಜ ಪಾಟೀಲ ಮತ್ತಿತರ ಗಣ್ಯರು ನಗರದ ಮೆಥೋಡಿಸ್ಟ್ ಚರ್ಚ್ನಲ್ಲಿ ಕ್ರಿಸ್ ಮಸ್ ಹಬ್ಬದ ಅಂಗವಾಗಿ ಕೇಕ್ ಕತ್ತರಿಸುವ ಮೂಲಕ ಕ್ರಿಸ್ಮಸ್ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು.</p>.<p>ಶಾಸಕ ಶಿವರಾಜ ಪಾಟೀಲ,‘ಅತ್ಯಂತ ಹಿಂದಿನಕಾಲದಿಂದಲೂ ರಾಯಚೂರು ನಗರದಲ್ಲಿ ವಾಸಿಸುತ್ತಿರುವ ಕ್ರೈಸ್ತ ಸಮುದಾಯ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರ ಏಳಿಗೆಗೆ ಶ್ರಮಿಸುತ್ತಿರುವದು ಶ್ಲಾಘನೀಯ’ ಎಂದರು.</p>.<p>‘ಕ್ರೈಸ್ತ ಸಮುದಾಯ ಬಡವರಿಗೆ ಶಿಕ್ಷಣ, ಆರೋಗ್ಯ ಸೇವೆ ನೀಡುವ ಮೂಲಕ ಸಮಾಜದಲ್ಲಿ ಸೇವಾ ಮನೋಭಾವವುಳ್ಳ ಸಮುದಾಯವಾಗಿದೆ. ಸಮಾಜದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯವನ್ನು ಮಾಡಲು ಎಲ್ಲಾ ರೀತಿಯ ಸಹಕಾರವನ್ನು ನೀಡುವೆ’ ಎಂದರು.</p>.<p>ಮುಖಂಡರಾದ ಕಡಗೋಲ ಆಂಜನೇಯ, ವೈ.ಗೋಪಾಲರೆಡ್ಡಿ, ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷ್ಮೀ, ಸ್ಟೀವನ್ ಬಿನ್ನಿ ಸೇರಿದಂತೆ ಚರ್ಚ್ನ ಧರ್ಮಗುರುಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.</p>.<p>ಶಕ್ತಿ ನಗರ ವರದಿ: ತಾಲ್ಲೂಕಿನ ಶಕ್ತಿನಗರದಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಶಾಸಕ ಬಸನಗೌಡ ದದ್ದಲ ಮತ್ತಿತರ ಗಣ್ಯರು ವಿವಿಧ ಚರ್ಚ್ಗಳಿಗೆ ಭೇಟಿ ನೀಡಿ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸಿದರು.</p>.<p>ಮೊದಲಿಗೆ ಕ್ಯಾಥೊಲಿಕ್ ಚರ್ಚ್ನಲ್ಲಿ ಧರ್ಮಗುರು ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>