ಸ್ವಲ್ಪ ಸಮಯದ ನಂತರ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೈ–ಕೈ ಮಿಲಾಯಿಸುವ ಹಂತ ತಲುಪಿತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಎರಡು ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಕಳಿಸಲು ಪ್ರಯತ್ನಿಸಿದರು. ಸಚಿವರ ಪುತ್ರ, ಮುಖಂಡ ರವಿ ಬೋಸರಾಜು ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರೂ ವಾತಾವರಣ ತಿಳಿಗೊಳ್ಳಲಿಲ್ಲ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಕಾರ್ಯಕರ್ತರತ್ತ ಲಾಠಿ ಬೀಸಿ ಗುಂಪನ್ನು ಚದುರಿಸಿದರು.