<p>ಪ್ರಜಾವಾಣಿ ವಾರ್ತೆ</p>.<p>ಕವಿತಾಳ: ‘ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಸೊಳ್ಳೆ ಪರದೆ ಮತ್ತು ಸೊಳ್ಳೆ ನಿಯಂತ್ರಕಗಳನ್ನು ಬಳಸಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.</p>.<p>ಮಾನ್ವಿ ತಾಲ್ಲೂಕಿನ ಉಟಕನೂರು ಗ್ರಾಮದಲ್ಲಿ ಈಚೆಗೆ ಶಂಕಿತ ಡೆಂಗಿ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಮನೆ ಮನೆಗೆ ತೆರಳಿ ಮಾಹಿತಿ ನೀಡಿದ ಅವರು, ‘ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ’ ಎಂದರು.</p>.<p>ತೀವ್ರ ಜ್ವರ, ಮೈ ಕೈ ನೋವು, ತಲೆ ನೋವು ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಗ್ರಾಮದ ಮಲ್ಲಯ್ಯ ಲಿಂಗರಾಜ (22) ಮತ್ತು ನಿರಜ್ ಶಿವಶಂಕರ್ (14) ಅವರಿಗೆ ಶಂಕಿತ ಡೆಂಗಿ ಎನ್ನಲಾಗಿದ್ದು, ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಡೆಂಗಿ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಸೊಳ್ಳೆಗಳ ನಿಯಂತ್ರಣ ಅಗತ್ಯ’ ಎಂದರು.</p>.<p>ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುಧೀರ್ ಬಾಬು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ನಾಗರತ್ನ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕವಿತಾಳ: ‘ಡೆಂಗಿ ಪ್ರಕರಣಗಳು ಹೆಚ್ಚುತ್ತಿದ್ದು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಸೊಳ್ಳೆ ಪರದೆ ಮತ್ತು ಸೊಳ್ಳೆ ನಿಯಂತ್ರಕಗಳನ್ನು ಬಳಸಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.</p>.<p>ಮಾನ್ವಿ ತಾಲ್ಲೂಕಿನ ಉಟಕನೂರು ಗ್ರಾಮದಲ್ಲಿ ಈಚೆಗೆ ಶಂಕಿತ ಡೆಂಗಿ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಮನೆ ಮನೆಗೆ ತೆರಳಿ ಮಾಹಿತಿ ನೀಡಿದ ಅವರು, ‘ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ’ ಎಂದರು.</p>.<p>ತೀವ್ರ ಜ್ವರ, ಮೈ ಕೈ ನೋವು, ತಲೆ ನೋವು ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಗ್ರಾಮದ ಮಲ್ಲಯ್ಯ ಲಿಂಗರಾಜ (22) ಮತ್ತು ನಿರಜ್ ಶಿವಶಂಕರ್ (14) ಅವರಿಗೆ ಶಂಕಿತ ಡೆಂಗಿ ಎನ್ನಲಾಗಿದ್ದು, ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಡೆಂಗಿ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಸೊಳ್ಳೆಗಳ ನಿಯಂತ್ರಣ ಅಗತ್ಯ’ ಎಂದರು.</p>.<p>ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುಧೀರ್ ಬಾಬು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ನಾಗರತ್ನ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>