<p><strong>ರಾಯಚೂರು</strong>: ಇಲ್ಲಿನ ನೇತಾಜಿ ನಗರದ ವಾರ್ಡ್ ನಂ. 15 ರ ಅಂಬಾಭವಾನಿ ಹುಲಿಗೆಮ್ಮದೇವಿ ದೇವಸ್ಥಾನದ ಸಮೀಪ ಹಾಯ್ದು ಹೋದ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಕಟ್ಟಡಗಳ ನಿರ್ಮಾಣ ಮಾಡಿಕೊಂಡಿದ್ದರಿಂದ ನೀರು ಹರಿಯಲು ಸಮಸ್ಯೆಯಾಗಿದೆ ಕೂಡಲೇ ಒತ್ತುವರಿ ತೆರವು ಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಪರಶುರಾಮ ಒತ್ತಾಯಿಸಿದರು.<br><br> ಭೂಗಳ್ಳರು ರಾಜಕಾಲುವೆ ಅತಿಕ್ರಮಣ ಮಾಡಿಕೊಂಡು ಮಳಿಗೆಗಳನ್ನು ಕಟ್ಟಿಕೊಂಡಿದ್ದಾರೆ. ಹೀಗಾಗಿ ಮಳೆ ನೀರು ಸಾರಗವಾಗಿ ಹರಿದು ಹೋಗುತ್ತಿಲ್ಲ. ನೀರು ಹರಿವಿನ ದಿಕ್ಕು ಬದಲಾದ ಕಾರಣ ತಗ್ಗು ಪ್ರದೇಶದ ಜನರ ಮನೆಗೆ ನೀರು ನುಗ್ಗುತ್ತಿದೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.<br><br> ನೇತಾಜಿನಗರ ಸೇರಿ ಇತರೆಡೆ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ಥವಾಗುತ್ತಿದೆ. ವಸ್ತುಗಳು, ದಾಖಲಾತಿಗಳು ಹಾಳಾಗಿವೆ. ವಿಷ ಜಂತುಗಳು ಮನೆಯೊಳಗೆ ಸೇರುವಂತಾಗಿದೆ ಎಂದು ತಿಳಿಸಿದರು.<br><br> ಒತ್ತುವರಿ ತೆರವು ಗೊಳಿಸಲು ಜಿಲ್ಲಾಡಳಿತಕ್ಕೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ ಎಂದು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.<br><br> ಬಡಾವಣೆಯಲ್ಲಿನ ಕಸವನ್ನು ಮಟಮಾರಿ ನಾಗಪ್ಪ ಮನೆಯ ಮುಂಭಾಗದಲ್ಲಿಯೇ ಸಂಗ್ರಹ ಮಾಡುತ್ತಿದ್ದಾರೆ.. ಇದರಿಂದ ಬಡಾವಣೆಯಲ್ಲಿ ದುರ್ವಾಸನೆ ಹಬ್ಬಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಹಾನಗರಪಾಲಿಕೆ ಅಧಿಕಾರಿಗಳು ಘನತ್ಯಾಜ್ಯ ವಿಲೇವಾರಿಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಡಿದರು. ಮಹೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಇಲ್ಲಿನ ನೇತಾಜಿ ನಗರದ ವಾರ್ಡ್ ನಂ. 15 ರ ಅಂಬಾಭವಾನಿ ಹುಲಿಗೆಮ್ಮದೇವಿ ದೇವಸ್ಥಾನದ ಸಮೀಪ ಹಾಯ್ದು ಹೋದ ರಾಜ ಕಾಲುವೆಯನ್ನು ಒತ್ತುವರಿ ಮಾಡಿ ಕಟ್ಟಡಗಳ ನಿರ್ಮಾಣ ಮಾಡಿಕೊಂಡಿದ್ದರಿಂದ ನೀರು ಹರಿಯಲು ಸಮಸ್ಯೆಯಾಗಿದೆ ಕೂಡಲೇ ಒತ್ತುವರಿ ತೆರವು ಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಪರಶುರಾಮ ಒತ್ತಾಯಿಸಿದರು.<br><br> ಭೂಗಳ್ಳರು ರಾಜಕಾಲುವೆ ಅತಿಕ್ರಮಣ ಮಾಡಿಕೊಂಡು ಮಳಿಗೆಗಳನ್ನು ಕಟ್ಟಿಕೊಂಡಿದ್ದಾರೆ. ಹೀಗಾಗಿ ಮಳೆ ನೀರು ಸಾರಗವಾಗಿ ಹರಿದು ಹೋಗುತ್ತಿಲ್ಲ. ನೀರು ಹರಿವಿನ ದಿಕ್ಕು ಬದಲಾದ ಕಾರಣ ತಗ್ಗು ಪ್ರದೇಶದ ಜನರ ಮನೆಗೆ ನೀರು ನುಗ್ಗುತ್ತಿದೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.<br><br> ನೇತಾಜಿನಗರ ಸೇರಿ ಇತರೆಡೆ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ಥವಾಗುತ್ತಿದೆ. ವಸ್ತುಗಳು, ದಾಖಲಾತಿಗಳು ಹಾಳಾಗಿವೆ. ವಿಷ ಜಂತುಗಳು ಮನೆಯೊಳಗೆ ಸೇರುವಂತಾಗಿದೆ ಎಂದು ತಿಳಿಸಿದರು.<br><br> ಒತ್ತುವರಿ ತೆರವು ಗೊಳಿಸಲು ಜಿಲ್ಲಾಡಳಿತಕ್ಕೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ ಎಂದು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.<br><br> ಬಡಾವಣೆಯಲ್ಲಿನ ಕಸವನ್ನು ಮಟಮಾರಿ ನಾಗಪ್ಪ ಮನೆಯ ಮುಂಭಾಗದಲ್ಲಿಯೇ ಸಂಗ್ರಹ ಮಾಡುತ್ತಿದ್ದಾರೆ.. ಇದರಿಂದ ಬಡಾವಣೆಯಲ್ಲಿ ದುರ್ವಾಸನೆ ಹಬ್ಬಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಹಾನಗರಪಾಲಿಕೆ ಅಧಿಕಾರಿಗಳು ಘನತ್ಯಾಜ್ಯ ವಿಲೇವಾರಿಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಡಿದರು. ಮಹೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>