ಜಗದ್ಗುರುಗಳು ಸಣ್ಣ ವಯಸ್ಸಿನವರಾದರೂ, ದೊಡ್ಡ ಸಾಧನೆ ಮಾಡುವ ಶಕ್ತಿ ಅವರಿಗಿದೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರು ಶ್ರಮಿಸುತ್ತಿದ್ದು, ನಾವೆಲ್ಲರೂ ಅವರ ಜೊತೆಗೆ ನಿಲ್ಲಬೇಕಿದೆ. 500 ಕಿಮೀ ಪಾದಯಾತ್ರೆ ಮಾಡಿದರು. ಕ್ಷೇತ್ರದ ಅಭಿವೃದ್ಧಿಯಲ್ಲಿ ಕಂಬಿ ಮಂಟಪ, ಕಲ್ಯಾಣ ಮಂಟಪ ಮೊದಲ ಹೆಜ್ಜೆಯಾಗಿದೆ. ಶಾಲೆ, ಆಸ್ಪತ್ರೆ ನಿರ್ಮಾಣದ ಸಂಕಲ್ಪಕ್ಕೆ ಶ್ರೀ ಶೈಲ ಮಲ್ಲಿಕಾರ್ಜುನ ಆಶೀರ್ವಾದ ಮಾಡುತ್ತಾರೆ. ಸರ್ಕಾರ ಈಗಾಗಲೇ ₹5 ಕೋಟಿಗಳನ್ನು ಮಂಜೂರು ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.