ಎಲ್ಲವೂ ಅವರಿಗೆ ಗೊತ್ತಿದೆ. ಮುಖ್ಯಮಂತ್ರಿಗಳಿಗೆ ನಮ್ಮ ಅವಶ್ಯಕತೆ ಇದ್ದರೆ ಅವರೊಂದಿಗೆ ಕೈ ಜೋಡಿಸುತ್ತೇವೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವಷ್ಟು ಶಕ್ತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ಜಿಲ್ಲೆಯನೆರೆ ಪೀಡಿತ ಪ್ರದೇಶಗಳ ಭೇಟಿಗಾಗಿ ಬಂದಿದ್ದೇನೆ. ಆದರೆ, ತುರ್ತು ಕೆಲಸ ಇರುವುದರಿಂದ ಬೆಂಗಳೂರಿಗೆ ಹೋಗಬೇಕಾಗಿದೆ. ಭಾನುವಾರದ ಭೇಟಿ ಮೊಟಕುಗೊಳಿಸಿದ್ದೇನೆ’ ಎಂದರು.