ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ‘

Published 28 ಏಪ್ರಿಲ್ 2024, 15:59 IST
Last Updated 28 ಏಪ್ರಿಲ್ 2024, 15:59 IST
ಅಕ್ಷರ ಗಾತ್ರ

ರಾಯಚೂರು: ‘ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂಕೋರ್ಟ್ ಒಪ್ಪಿದೆ. ಪದೇ ಪದೇ ದೇಶದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ.ಮೋದಿಗೆ ಸಂವಿಧಾನ ಗೊತ್ತಿಲ್ಲ, ಇಲ್ಲಾ ಗೊತ್ತಿದ್ರೂ ಸುಳ್ಳು ಹೇಳುತ್ತಿದ್ದಾರೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿಂಧನೂರಿನ ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ನಮ್ಮ ಸಂವಿಧಾನ, ಸಾಮಾಜಿಕ ನ್ಯಾಯ ಬಗ್ಗೆ ಬಿಜೆಪಿಗೆ ಗೌರವವಿಲ್ಲ. ಮಹಿಳೆಯರಿಗೆ ಮೀಸಲಾತಿ, ಹಿಂದುಳಿದವರಿಗೆ, ಮುಸ್ಮರಿಗೆ ಮೀಸಲಾತಿ ಕೊಟ್ಟಿದ್ದು ಯಾರು ಎನ್ನುವುದೂ ಬಿಜೆಪಿಗೆ ಗೊತ್ತಿಲ್ಲ‘ ಎಂದು ಟೀಕಿಸಿದರರು.

ಆರ್‌ಎಸ್‌ಎಸ್‌ನ ರಾಮಾ ಜೋಯಿಸ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಸುಪ್ರಿಂ ಕೋರ್ಟ್ ಅದೃಷ್ಟವಶಾತ್ ತಿರಸ್ಕಾರ ಮಾಡಿತು.

ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂ ಕೊರ್ಟ್ ಒಪ್ಪಿದೆ‘ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT