<p>ಸಿಂಧನೂರು: ಜ.3 ರಂದು ಸುಕ್ಷೇತ್ರ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಾಲ್ಲೂಕಿನಲ್ಲಿ ₹ 400 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. </p>.<p>ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿದರು.</p>.<p>‘ಸಿಎಂ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಶರಣಪ್ರಕಾಶ ಪಾಟೀಲ, ಸಚಿವ ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ ಪಾಲ್ಗೊಳ್ಳುವರು. ತಾಲ್ಲೂಕಿನ 24 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಈಗಾಗಲೇ ಪ್ರಸ್ತಾವ ಕಳುಹಿಸಲಾಗಿದ್ದು, ಅನುಮೋದನೆ ಹಂತದಲ್ಲಿದೆ. ಅಂದು ಮುಖ್ಯಮಂತ್ರಿಗಳು ಪ್ರತಿ ಗ್ರಾಮಗಳ 5 ಜನರಿಗೆ ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ನೀಡಲಿದ್ದಾರೆ ಎಂದು ಹೇಳಿದರು. </p>.<p>ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಜಿಲ್ಲಾಧಿಕಾರಿ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿದ್ದಾರೆ. ತಹಶೀಲ್ದಾರ್ ಮೇಲುಸ್ತುವಾರಿಯನ್ನು ವಹಿಸಿದ್ದು, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು. ಭಕ್ತಿ-ಶಕ್ತಿ-ಪರಂಪರೆಯ ದಿವ್ಯ ಸಂಗಮ ಘೋಷವಾಕ್ಯದೊಂದಿಗೆ 5 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು. </p>.<p>15 ವಿಶೇಷ ಬಸ್ ವ್ಯವಸ್ಥೆ: ಜ.3 ರಂದೇ 15 ಹೊಸ ಬಸ್ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಈ ಬಸ್ಗಳನ್ನು ಜಾತ್ರಾ ಮಹೋತ್ಸವಕ್ಕೆ ನಿಯೋಜಿಸಲಾಗುವುದು. ಈ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. </p>.<p>ಜಿಲ್ಲಾ ಘೋಷಣೆಗೆ ಮನವಿ: ಜಾತ್ರೆ ಮುಗಿದ ನಂತರ ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆನ್ನುವ ಹಕ್ಕೊತ್ತಾಯದ ಕುರಿತು ವಿವಿಧ ಸಂಘಟನೆಗಳ, ಮುಖಂಡರ ಸಭೆಯನ್ನು ಕರೆಯಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಜ.3 ರಂದು ಸುಕ್ಷೇತ್ರ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಾಲ್ಲೂಕಿನಲ್ಲಿ ₹ 400 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. </p>.<p>ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿದರು.</p>.<p>‘ಸಿಎಂ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಶರಣಪ್ರಕಾಶ ಪಾಟೀಲ, ಸಚಿವ ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ ಪಾಲ್ಗೊಳ್ಳುವರು. ತಾಲ್ಲೂಕಿನ 24 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಈಗಾಗಲೇ ಪ್ರಸ್ತಾವ ಕಳುಹಿಸಲಾಗಿದ್ದು, ಅನುಮೋದನೆ ಹಂತದಲ್ಲಿದೆ. ಅಂದು ಮುಖ್ಯಮಂತ್ರಿಗಳು ಪ್ರತಿ ಗ್ರಾಮಗಳ 5 ಜನರಿಗೆ ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ನೀಡಲಿದ್ದಾರೆ ಎಂದು ಹೇಳಿದರು. </p>.<p>ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಜಿಲ್ಲಾಧಿಕಾರಿ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿದ್ದಾರೆ. ತಹಶೀಲ್ದಾರ್ ಮೇಲುಸ್ತುವಾರಿಯನ್ನು ವಹಿಸಿದ್ದು, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು. ಭಕ್ತಿ-ಶಕ್ತಿ-ಪರಂಪರೆಯ ದಿವ್ಯ ಸಂಗಮ ಘೋಷವಾಕ್ಯದೊಂದಿಗೆ 5 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು. </p>.<p>15 ವಿಶೇಷ ಬಸ್ ವ್ಯವಸ್ಥೆ: ಜ.3 ರಂದೇ 15 ಹೊಸ ಬಸ್ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಈ ಬಸ್ಗಳನ್ನು ಜಾತ್ರಾ ಮಹೋತ್ಸವಕ್ಕೆ ನಿಯೋಜಿಸಲಾಗುವುದು. ಈ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. </p>.<p>ಜಿಲ್ಲಾ ಘೋಷಣೆಗೆ ಮನವಿ: ಜಾತ್ರೆ ಮುಗಿದ ನಂತರ ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆನ್ನುವ ಹಕ್ಕೊತ್ತಾಯದ ಕುರಿತು ವಿವಿಧ ಸಂಘಟನೆಗಳ, ಮುಖಂಡರ ಸಭೆಯನ್ನು ಕರೆಯಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>