<p><strong>ರಾಯಚೂರು</strong>: ಹೊರಗುತ್ತಿಗೆ ಪೌರಕಾರ್ಮಿಕರಿಗೆ ಸಮರ್ಪಕವಾಗಿ ಪ್ರತಿತಿಂಗಳು ವೇತನ ಪಾವತಿಸುವುದಕ್ಕೆ ನಗರಸಭೆಯಲ್ಲಿ ಸೋಮವಾರ ನಡೆದ ಸಾಮಾನ್ಯಸಭೆಯಲ್ಲಿ ಚರ್ಚಿಸಿ ಸದಸ್ಯರು ನಿರ್ಧರಿಸಿದರು.</p>.<p>ನಗರಸಭೆಯಲ್ಲಿ 280 ಜನ ಗುತ್ತಿಗೆ ಕಾರ್ಮಿಕರ ಕೆಲಸ ಮಾಡುತ್ತಿದ್ದು, ಪ್ರತಿತಿಂಗಳು ₹50 ಲಕ್ಷ ವೇತನ ನೀಡಲಾಗುತ್ತಿದೆ. ಗೈರು ಹಾಜರಾದ ಕಾರ್ಮಿಕರ ವೇತನವನ್ನು ಸರಿದೂಗಿಸಲು ಕ್ರಮ ತೆಗೆದುಕೊಳ್ಳಲು ನಿಯಮದಲ್ಲಿ ಅವಕಾಶವಿದೆಯೆ ಎಂದು ಸದಸ್ಯ ಜಯಣ್ಣ ಅವರು ಪ್ರಶ್ನಿಸಿದರು.</p>.<p>ನಗರಸಭೆಯಲ್ಲಿ 280 ಹೊರಗುತ್ತಿಗೆ ಕಾರ್ಮಿಕರ ಗೈರುಹಾಜರಿಯಾದ ಕಾರ್ಮಿಕರ ವೇತನದಲ್ಲಿ 150 ಕಾರ್ಮಿಕರಿಗೆ ವೇತನ ನೀಡಲು ಸಭೆಯಲ್ಲಿ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಾಯಿತು. ಉಮೇಶ ಎನ್ನುವ ಕಾರ್ಮಿಕನಿಗೆ ಐದು ತಿಂಗಳ ಬಾಕಿ ವೇತನ ಪಾವತಿಸಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.</p>.<p>ನಗರಸಭೆ ಸದಸ್ಯ ಎನ್.ಶ್ರೀನಿವಾಸರೆಡ್ಡಿ ಮಾತನಾಡಿ, ನಗರಸಭೆಯ 300 ಮಳಿಗೆಗಳಿದ್ದರೂ ಬಾಡಿಗೆ ವಸೂಲಿಯಾಗುತ್ತಿಲ್ಲ. ಕೇವಲ ₹48 ಸಾವಿರ ಜಮಾ ಮಾಡಲಾಗಿದೆ. ಆದರೆ, ಪ್ರತಿ ಸಭೆಯಲ್ಲಿಯೂ ಮಳಿಗೆಗಳ ಟೆಂಡರ್ ಕರೆಯಬೇಕು ಎಂದು ಒತ್ತಾಯಿಸುತ್ತಾ ಬರಲಾಗಿದೆ. ಆದರೆ, ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಹಾಗೂ ಪೌರಾಯುಕ್ತ ಕೆ.ಮುನಿಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ನಗರದಲ್ಲಿರುವ ನಗರಸಭೆ ಮಳಿಗೆಗಳ ಟೆಂಡರ್ ಆಹ್ವಾನಿಸಲಾಗುವುದು ಎಂದು ತಿಳಿಸಿದರು.</p>.<p>ನಗರಸಭೆ ಸದಸ್ಯ ನರಸರೆಡ್ಡಿ ಮಾತನಾಡಿ, ಮೆಗಾ ರೆಸ್ಟೊರೆಂಟ್ ವಾರ್ಡ್ ನಂಬರ್ 33ರ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದರೂ ನಗರಸಭೆಯಿಂದ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಲಾಗಿದೆ. ನಳದ ಸಂಪರ್ಕ ಕಲ್ಪಿಸಲಾಗಿದೆ. ಚಿಕ್ಕಸುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವುದರಿಂದ ನಕಲಿ ದಾಖಲೆ ಸೃಷ್ಟಿಸಲಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳದೇ ಇದ್ದರೆ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಎಚ್ಚರಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಪ್ರಕರಣ ನ್ಯಾಯಾಲಯದಲ್ಲಿರುವ ಇರುವುದರಿಂದ ಸಭೆಯಲ್ಲಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.</p>.<p>ಜಯಣ್ಣ ಮಾತನಾಡಿ, ನಗರದ ಎಲ್ಲ ವಾರ್ಡ್ಗಳಲ್ಲಿಯೂ ರಸ್ತೆ ಅಗಲೀಕರಣ ನಡೆಯುತ್ತದೆ. ಹೀಗಾಗಿ ಎಲ್ಲ ಸದಸ್ಯರು ಒಟ್ಟಾಗಿ ನಿಯೋಗದೊಂದಿಗೆ ಬೆಂಗಳೂರಿಗೆ ತೆರಳಿ ನಗರಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಸಾಜೀದ್ ಸಮೀರ್ ಮಾತನಾಡಿ, ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಪ್ರಕಾರ, ಅನುದಾನ ಮೀಸಲಿಡಬೇಕು ಎಂದರು.</p>.<p>ನಗರಸಭೆ ಅಧ್ಯಕ್ಷ ಇ.ವಿನಯಕುಮಾರ್ ಮಾತನಾಡಿ, ಕಳೆದ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಮಾಡಿರುವಂತೆ ಪ್ರತಿ ವಾರ್ಡ್ಗೂ ₹10 ಲಕ್ಷ ಅನುದಾಆನ ಒದಗಿಸಲು ಸರ್ಕಾರದಿಂದ ಅನುಮೋದನೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಜೆಟ್ನಲ್ಲಿ ಸೇರ್ಪಡೆಯಾಗಲಿಲ್ಲ ಎನ್ನುವ ಕಾರಣಕ್ಕೆ ಅನುದಾನ ಬಳಕೆ ಮಾಡುವುದನ್ನು ತಡೆಯುವುದು ಸರಿಯಲ್ಲ. ಟೆಂಡರ್ ಪ್ರಕ್ರಿಯೆ ನಡೆಸುವುದಕ್ಕೆ ಸಭ ಅನುಮೀದನೆ ಸೂಚಿಸಿದೆ. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶವನ್ನು ತೋರಿಸಿದರೆ ಅನುದಾನ ಮೀಸಲಿಡಲಾಗುವುದು ಎಂದರು.</p>.<p>ಪೌರಾಯುಕ್ತ ಮುನಿಸ್ವಾಮಿ ಮಾತನಾಡಿ, ಅನುದಾನ ಹಂಚಿಕೆಯನ್ನು ನಗರಾಭಿವೃದ್ಧಿ ಪ್ರಾದಿಕಾರ ತಡೆದಿಲ್ಲ. ಹಣಕಾಸು ಇಲಾಖೆಯು ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದೆ. ಕೂಡಲೇ ಈ ಬಗೆಗಿನ ಗೊಂದಲವನ್ನು ನಿವಾರಿಸಿ ಅನುದಾನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.</p>.<p>ಉಪಾಧ್ಯಕ್ಷೆ ನರಸಮ್ಮ ನರಸಪ್ಪ ಮಾಡಗಿರಿ, ನಗರಸಭೆ ಸದಸ್ಯರಾದ ಎನ್.ಕೆ ನಾಗರಾಜ, ಬಸವರಾಜ ಪಾಟೀಲ್ ದರೂರು, ಜಿಂದಪ್ಪ, ಶರಣಪ್ಪ ಬಲ್ಲಟಗಿ, ಎಸ್.ರಾಜು, ಗೋವಿಂದ ಹಾಗೂ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಹೊರಗುತ್ತಿಗೆ ಪೌರಕಾರ್ಮಿಕರಿಗೆ ಸಮರ್ಪಕವಾಗಿ ಪ್ರತಿತಿಂಗಳು ವೇತನ ಪಾವತಿಸುವುದಕ್ಕೆ ನಗರಸಭೆಯಲ್ಲಿ ಸೋಮವಾರ ನಡೆದ ಸಾಮಾನ್ಯಸಭೆಯಲ್ಲಿ ಚರ್ಚಿಸಿ ಸದಸ್ಯರು ನಿರ್ಧರಿಸಿದರು.</p>.<p>ನಗರಸಭೆಯಲ್ಲಿ 280 ಜನ ಗುತ್ತಿಗೆ ಕಾರ್ಮಿಕರ ಕೆಲಸ ಮಾಡುತ್ತಿದ್ದು, ಪ್ರತಿತಿಂಗಳು ₹50 ಲಕ್ಷ ವೇತನ ನೀಡಲಾಗುತ್ತಿದೆ. ಗೈರು ಹಾಜರಾದ ಕಾರ್ಮಿಕರ ವೇತನವನ್ನು ಸರಿದೂಗಿಸಲು ಕ್ರಮ ತೆಗೆದುಕೊಳ್ಳಲು ನಿಯಮದಲ್ಲಿ ಅವಕಾಶವಿದೆಯೆ ಎಂದು ಸದಸ್ಯ ಜಯಣ್ಣ ಅವರು ಪ್ರಶ್ನಿಸಿದರು.</p>.<p>ನಗರಸಭೆಯಲ್ಲಿ 280 ಹೊರಗುತ್ತಿಗೆ ಕಾರ್ಮಿಕರ ಗೈರುಹಾಜರಿಯಾದ ಕಾರ್ಮಿಕರ ವೇತನದಲ್ಲಿ 150 ಕಾರ್ಮಿಕರಿಗೆ ವೇತನ ನೀಡಲು ಸಭೆಯಲ್ಲಿ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳಲಾಯಿತು. ಉಮೇಶ ಎನ್ನುವ ಕಾರ್ಮಿಕನಿಗೆ ಐದು ತಿಂಗಳ ಬಾಕಿ ವೇತನ ಪಾವತಿಸಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.</p>.<p>ನಗರಸಭೆ ಸದಸ್ಯ ಎನ್.ಶ್ರೀನಿವಾಸರೆಡ್ಡಿ ಮಾತನಾಡಿ, ನಗರಸಭೆಯ 300 ಮಳಿಗೆಗಳಿದ್ದರೂ ಬಾಡಿಗೆ ವಸೂಲಿಯಾಗುತ್ತಿಲ್ಲ. ಕೇವಲ ₹48 ಸಾವಿರ ಜಮಾ ಮಾಡಲಾಗಿದೆ. ಆದರೆ, ಪ್ರತಿ ಸಭೆಯಲ್ಲಿಯೂ ಮಳಿಗೆಗಳ ಟೆಂಡರ್ ಕರೆಯಬೇಕು ಎಂದು ಒತ್ತಾಯಿಸುತ್ತಾ ಬರಲಾಗಿದೆ. ಆದರೆ, ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಹಾಗೂ ಪೌರಾಯುಕ್ತ ಕೆ.ಮುನಿಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ನಗರದಲ್ಲಿರುವ ನಗರಸಭೆ ಮಳಿಗೆಗಳ ಟೆಂಡರ್ ಆಹ್ವಾನಿಸಲಾಗುವುದು ಎಂದು ತಿಳಿಸಿದರು.</p>.<p>ನಗರಸಭೆ ಸದಸ್ಯ ನರಸರೆಡ್ಡಿ ಮಾತನಾಡಿ, ಮೆಗಾ ರೆಸ್ಟೊರೆಂಟ್ ವಾರ್ಡ್ ನಂಬರ್ 33ರ ವ್ಯಾಪ್ತಿಯಲ್ಲಿ ಬರುವುದಿಲ್ಲ. ಆದರೂ ನಗರಸಭೆಯಿಂದ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಲಾಗಿದೆ. ನಳದ ಸಂಪರ್ಕ ಕಲ್ಪಿಸಲಾಗಿದೆ. ಚಿಕ್ಕಸುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವುದರಿಂದ ನಕಲಿ ದಾಖಲೆ ಸೃಷ್ಟಿಸಲಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳದೇ ಇದ್ದರೆ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಎಚ್ಚರಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಪ್ರಕರಣ ನ್ಯಾಯಾಲಯದಲ್ಲಿರುವ ಇರುವುದರಿಂದ ಸಭೆಯಲ್ಲಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.</p>.<p>ಜಯಣ್ಣ ಮಾತನಾಡಿ, ನಗರದ ಎಲ್ಲ ವಾರ್ಡ್ಗಳಲ್ಲಿಯೂ ರಸ್ತೆ ಅಗಲೀಕರಣ ನಡೆಯುತ್ತದೆ. ಹೀಗಾಗಿ ಎಲ್ಲ ಸದಸ್ಯರು ಒಟ್ಟಾಗಿ ನಿಯೋಗದೊಂದಿಗೆ ಬೆಂಗಳೂರಿಗೆ ತೆರಳಿ ನಗರಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಸಾಜೀದ್ ಸಮೀರ್ ಮಾತನಾಡಿ, ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಪ್ರಕಾರ, ಅನುದಾನ ಮೀಸಲಿಡಬೇಕು ಎಂದರು.</p>.<p>ನಗರಸಭೆ ಅಧ್ಯಕ್ಷ ಇ.ವಿನಯಕುಮಾರ್ ಮಾತನಾಡಿ, ಕಳೆದ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಮಾಡಿರುವಂತೆ ಪ್ರತಿ ವಾರ್ಡ್ಗೂ ₹10 ಲಕ್ಷ ಅನುದಾಆನ ಒದಗಿಸಲು ಸರ್ಕಾರದಿಂದ ಅನುಮೋದನೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಜೆಟ್ನಲ್ಲಿ ಸೇರ್ಪಡೆಯಾಗಲಿಲ್ಲ ಎನ್ನುವ ಕಾರಣಕ್ಕೆ ಅನುದಾನ ಬಳಕೆ ಮಾಡುವುದನ್ನು ತಡೆಯುವುದು ಸರಿಯಲ್ಲ. ಟೆಂಡರ್ ಪ್ರಕ್ರಿಯೆ ನಡೆಸುವುದಕ್ಕೆ ಸಭ ಅನುಮೀದನೆ ಸೂಚಿಸಿದೆ. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶವನ್ನು ತೋರಿಸಿದರೆ ಅನುದಾನ ಮೀಸಲಿಡಲಾಗುವುದು ಎಂದರು.</p>.<p>ಪೌರಾಯುಕ್ತ ಮುನಿಸ್ವಾಮಿ ಮಾತನಾಡಿ, ಅನುದಾನ ಹಂಚಿಕೆಯನ್ನು ನಗರಾಭಿವೃದ್ಧಿ ಪ್ರಾದಿಕಾರ ತಡೆದಿಲ್ಲ. ಹಣಕಾಸು ಇಲಾಖೆಯು ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದೆ. ಕೂಡಲೇ ಈ ಬಗೆಗಿನ ಗೊಂದಲವನ್ನು ನಿವಾರಿಸಿ ಅನುದಾನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.</p>.<p>ಉಪಾಧ್ಯಕ್ಷೆ ನರಸಮ್ಮ ನರಸಪ್ಪ ಮಾಡಗಿರಿ, ನಗರಸಭೆ ಸದಸ್ಯರಾದ ಎನ್.ಕೆ ನಾಗರಾಜ, ಬಸವರಾಜ ಪಾಟೀಲ್ ದರೂರು, ಜಿಂದಪ್ಪ, ಶರಣಪ್ಪ ಬಲ್ಲಟಗಿ, ಎಸ್.ರಾಜು, ಗೋವಿಂದ ಹಾಗೂ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>