<p><strong>ಸಿಂಧನೂರು (ರಾಯಚೂರು ಜಿಲ್ಲೆ):</strong>‘ಸಮುದಾಯವೊಂದನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಯುವಕ ಪೋಸ್ಟ್ ಹಾಕಿದ್ದಾನೆ’ ಎಂದು ಆರೋಪಿಸಿ ಸಹಸ್ರಾರು ಜನರು ಶುಕ್ರವಾರ ಸಂಜೆ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಹುಮನಾಬಾದ್ನಲ್ಲಿ ತಹಶೀಲ್ದಾರ್ ಮೇಲೆ ನಡೆದ ಹಲ್ಲೆ ಖಂಡಿಸಿ ವೀರಶೈವ ಸಮುದಾಯದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಿತು. ಸಭೆಯ ನಂತರ ಮನವಿಪತ್ರ ಸಲ್ಲಿಸಿ ಪ್ರತಿಭಟನಾಕಾರರು ತೆರಳಿದ್ದರು.</p>.<p>ಸಾಸಲಮರಿ ಗ್ರಾಮದ ಯುವಕ ಪ್ರತಿಭಟನೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿಆಕ್ಷೇಪಾರ್ಹ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ.</p>.<p>ಇದನ್ನು ಗಮನಿಸಿದ ಕೆಲವರು ಗುಂಪುಗೂಡಿ ಗಾಂಧಿಸರ್ಕಲ್ಗೆ ಬಂದು ಪ್ರತಿಭಟನೆ ನಡೆಸಿದರು. ಆಕ್ಷೇಪಾರ್ಹ ಪೋಸ್ಟ್ ಮಾಡಿದ ಯುವಕನನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದರು. ನಂತರ ಪೊಲೀಸ್ ಠಾಣೆಗೆ ತೆರಳಿ, ಮುತ್ತಿಗೆ ಹಾಕಿದರು.</p>.<p>ವೀರಶೈವ ಸಮುದಾಯದ ಮುಖಂಡರಾದ ಬಸವರಾಜ ನಾಡಗೌಡ, ಬಾಬುಗೌಡ ಬಾದರ್ಲಿ, ಅಶೋಕಗೌಡ ಗದ್ರಟಗಿ, ಬಸನಗೌಡ ಬಾದರ್ಲಿ ಅವರು ಪೊಲೀಸ್ ಠಾಣೆಗೆ ಬಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಯುವಕನನ್ನು ಠಾಣೆಗೆ ಕರೆತರುವ ತನಕ ತಾವು ತೆರಳುವುದಿಲ್ಲ ಎಂದು ಉದ್ರಿಕ್ತರು ಪಟ್ಟು ಹಿಡಿದರು.</p>.<p>ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ಉಮೇಶ ಕಾಂಬ್ಳೆ, ಪಿಎಸ್ಐ ಸೌಮ್ಯಾ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಮಾಡಿದ ಪ್ರಯತ್ನ ಫಲಿಸಲಿಲ್ಲ.</p>.<p>ವೀರಶೈವ ಸಮಾಜದ ಸಿಂಧನೂರು ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕಗೌಡ ಗದ್ರಟಗಿ ಅವರು ನೀಡಿದ ದೂರಿನ ಅನ್ವಯ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಯುವಕ ಗಣೇಶ ವಿರುದ್ಧ ‘ಸಮುದಾಯವನ್ನು ಅಪಮಾನಿಸಿದ’ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡರು. ನಂತರ ಪ್ರತಿಭಟನಾಕಾರರು ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು (ರಾಯಚೂರು ಜಿಲ್ಲೆ):</strong>‘ಸಮುದಾಯವೊಂದನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಯುವಕ ಪೋಸ್ಟ್ ಹಾಕಿದ್ದಾನೆ’ ಎಂದು ಆರೋಪಿಸಿ ಸಹಸ್ರಾರು ಜನರು ಶುಕ್ರವಾರ ಸಂಜೆ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಹುಮನಾಬಾದ್ನಲ್ಲಿ ತಹಶೀಲ್ದಾರ್ ಮೇಲೆ ನಡೆದ ಹಲ್ಲೆ ಖಂಡಿಸಿ ವೀರಶೈವ ಸಮುದಾಯದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆ ನಡೆಯಿತು. ಸಭೆಯ ನಂತರ ಮನವಿಪತ್ರ ಸಲ್ಲಿಸಿ ಪ್ರತಿಭಟನಾಕಾರರು ತೆರಳಿದ್ದರು.</p>.<p>ಸಾಸಲಮರಿ ಗ್ರಾಮದ ಯುವಕ ಪ್ರತಿಭಟನೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿಆಕ್ಷೇಪಾರ್ಹ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ.</p>.<p>ಇದನ್ನು ಗಮನಿಸಿದ ಕೆಲವರು ಗುಂಪುಗೂಡಿ ಗಾಂಧಿಸರ್ಕಲ್ಗೆ ಬಂದು ಪ್ರತಿಭಟನೆ ನಡೆಸಿದರು. ಆಕ್ಷೇಪಾರ್ಹ ಪೋಸ್ಟ್ ಮಾಡಿದ ಯುವಕನನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದರು. ನಂತರ ಪೊಲೀಸ್ ಠಾಣೆಗೆ ತೆರಳಿ, ಮುತ್ತಿಗೆ ಹಾಕಿದರು.</p>.<p>ವೀರಶೈವ ಸಮುದಾಯದ ಮುಖಂಡರಾದ ಬಸವರಾಜ ನಾಡಗೌಡ, ಬಾಬುಗೌಡ ಬಾದರ್ಲಿ, ಅಶೋಕಗೌಡ ಗದ್ರಟಗಿ, ಬಸನಗೌಡ ಬಾದರ್ಲಿ ಅವರು ಪೊಲೀಸ್ ಠಾಣೆಗೆ ಬಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಯುವಕನನ್ನು ಠಾಣೆಗೆ ಕರೆತರುವ ತನಕ ತಾವು ತೆರಳುವುದಿಲ್ಲ ಎಂದು ಉದ್ರಿಕ್ತರು ಪಟ್ಟು ಹಿಡಿದರು.</p>.<p>ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ಉಮೇಶ ಕಾಂಬ್ಳೆ, ಪಿಎಸ್ಐ ಸೌಮ್ಯಾ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಮಾಡಿದ ಪ್ರಯತ್ನ ಫಲಿಸಲಿಲ್ಲ.</p>.<p>ವೀರಶೈವ ಸಮಾಜದ ಸಿಂಧನೂರು ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕಗೌಡ ಗದ್ರಟಗಿ ಅವರು ನೀಡಿದ ದೂರಿನ ಅನ್ವಯ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಯುವಕ ಗಣೇಶ ವಿರುದ್ಧ ‘ಸಮುದಾಯವನ್ನು ಅಪಮಾನಿಸಿದ’ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡರು. ನಂತರ ಪ್ರತಿಭಟನಾಕಾರರು ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>