<p>ರಾಯಚೂರು: ಶೈಕ್ಷಣಿಕ ವರ್ಷ ಆರಂಭಕ್ಕೆ ಮುನ್ನ ಖಾಲಿ ಹುದ್ದೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶನಿವಾರ ನಗರದ ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿ ವರ್ಷ ಶೈಕ್ಷಣಿಕ ವರ್ಷ ಪ್ರಾರಂಭವಾದ ತಿಂಗಳುಗಳ ನಂತರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು ಶಾಲಾ ಆರಂಭದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಸಿದರೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.</p>.<p>ರಾಯಚೂರು ತಾಲ್ಲೂಕಿನಲ್ಲಿ ಸಾವಿರಾರು ಶಿಕ್ಷಕರ ಕೊರತೆಯಿದ್ದು ಮಕ್ಕಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಲ್ಲಿ ಬೋಧನೆಗೆ ಅನುಕೂಲವಾಗಲಿದೆ. ಅತಿಥಿ ಶಿಕ್ಷಕರ ಸೇವೆಯನ್ನು ವರ್ಷವೀಡಿ ಪರಿಗಣಿಸಿ ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಸಬೇಕು ಎಂದು ಆಗ್ರಹಿಸಿದರು. </p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹ ಮಲಯಾಬಾದ್, ಗೌರವಾಧ್ಯಕ್ಷೆ ಲಕ್ಷ್ಮಿ ನಾಯಕ, ಪದಾಧಿಕಾರಿಗಳಾದ ಪ್ರಶಾಂತ, ಎಸ್.ರವಿ, ತಿಮ್ಮಪ್ಪ ಅನ್ವರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಶೈಕ್ಷಣಿಕ ವರ್ಷ ಆರಂಭಕ್ಕೆ ಮುನ್ನ ಖಾಲಿ ಹುದ್ದೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶನಿವಾರ ನಗರದ ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿ ವರ್ಷ ಶೈಕ್ಷಣಿಕ ವರ್ಷ ಪ್ರಾರಂಭವಾದ ತಿಂಗಳುಗಳ ನಂತರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು ಶಾಲಾ ಆರಂಭದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಸಿದರೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.</p>.<p>ರಾಯಚೂರು ತಾಲ್ಲೂಕಿನಲ್ಲಿ ಸಾವಿರಾರು ಶಿಕ್ಷಕರ ಕೊರತೆಯಿದ್ದು ಮಕ್ಕಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಲ್ಲಿ ಬೋಧನೆಗೆ ಅನುಕೂಲವಾಗಲಿದೆ. ಅತಿಥಿ ಶಿಕ್ಷಕರ ಸೇವೆಯನ್ನು ವರ್ಷವೀಡಿ ಪರಿಗಣಿಸಿ ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಸಬೇಕು ಎಂದು ಆಗ್ರಹಿಸಿದರು. </p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹ ಮಲಯಾಬಾದ್, ಗೌರವಾಧ್ಯಕ್ಷೆ ಲಕ್ಷ್ಮಿ ನಾಯಕ, ಪದಾಧಿಕಾರಿಗಳಾದ ಪ್ರಶಾಂತ, ಎಸ್.ರವಿ, ತಿಮ್ಮಪ್ಪ ಅನ್ವರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>