ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ

ಅಭಿನಂದನಾ ಸಮಾರಂಭದಲ್ಲಿ ಶಾಸಕ ಆರ್. ಬಸನಗೌಡ ಹೇಳಿಕೆ
Last Updated 18 ಆಗಸ್ಟ್ 2021, 3:50 IST
ಅಕ್ಷರ ಗಾತ್ರ

ಮಸ್ಕಿ: 'ಉಪ ಚುನಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳಿಂದ ಶಾಸಕನನ್ನಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರ ಋಣ ನನ್ನ ಮೇಲೆ ಇದೆ. ಮತದಾರರ ಭಾವನೆಗಳಿಗೆ ಧಕ್ಕೆಯಾಗದಂತೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ‘ ಎಂದು ಶಾಸಕ ಆರ್. ಬಸನಗೌಡ ಹೇಳಿದರು.

ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಸಮಾಜದ ಹಿರಿಯ ಮುಖಂಡ ಅಂದಾನಪ್ಪ ಗುಂಡಳ್ಳಿ ಮಾತನಾಡಿ, ‘ಬಣಜಿಗ ಸಮಾಜಕ್ಕೆ ಶಾಸಕರು ಬರುವ ತಾಲ್ಲೂಕು, ಜಿಲ್ಲಾ ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣೆಯಲ್ಲಿ ಹೆಚ್ಚಿನ ಅವಕಾಶ ಕೊಡಬೇಕು‘ ಎಂದರು.

ಡಾ. ಶಿವಶರಣಪ್ಪ ಬಾಳೆಕಾಯಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಇರಲಿ, ನಂತರ ಎಲ್ಲರೂ ಕೂಡಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಉಮಕಾಂತಪ್ಪ ಸಂಗನಾಳ, ಡಾ.ಶಿವಶರಣಪ್ಪ ಇತ್ಲಿ, ಅಂದಾನಪ್ಪ ಗುಂಡಳ್ಳಿ, ಸಂಘದ ರಾಜ್ಯ ಕಾರ್ಯದರ್ಶಿ ಎನ್. ಅಮರೇಶ ಸಿಂಧನೂರು, ಶಶಿಕಾಂತ ಬ್ಯಾಳಿ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಗವಿಸಿದ್ದಪ್ಪ

ಸಾಹುಕಾರ, ಸೂಗಣ್ಣ ಬಾಳೇಕಾಯಿ, ನಾಗರಾಜ ಯಂಬಲದ, ನಾಗರಾಜ ಹಂಪನಾಳ, ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣ ಬ್ಯಾಳಿ ಇದ್ದರು. ಮಹಾಂತೇಶ ಬ್ಯಾಳಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT