ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಕಾಂಗ್ರೆಸ್ ಸಮಾವೇಶ ಇಂದು

ಡಿ.ಕೆ.ಶಿವಕುಮಾರ್, ಸಿದ್ಧರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರು ಭಾಗಿ
Last Updated 23 ನವೆಂಬರ್ 2020, 6:27 IST
ಅಕ್ಷರ ಗಾತ್ರ

ಮಸ್ಕಿ: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23 ರಂದು ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ
ನಾಯಕ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಪೊಲೀಸ್ ಠಾಣೆ ಪಕ್ಕದ ಜಾಗದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದೆ. ಸುಮಾರು 7 ಸಾವಿರ ಆಸನಗಳನ್ನು ಹಾಕಲಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ವಿವರ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಹೆಲಿಕ್ಯಾಪ್ಟರ್ ಮೂಲಕ ಬರುವರು. ಪಕ್ಷದ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ ಜಾರಕಿಹೋಳೆ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಮುಖಂಡರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಸುಮಾರು ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕರ್ತರಿಗೆ ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿವಿಧೆಡೆ ಫಾರ್ಕಿಂಗ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸುತ್ತಿರುವ ಮುಖಂಡರ ಬ್ಯಾನರ್, ಕಟೌಟ್ ರಾರಾಜಿಸುತ್ತಿವೆ. ದಾರಿಯುದ್ದಕ್ಕೂ ಕಾಂಗ್ರೆಸ್ ಚಿನ್ಹೆಯ ಬಂಟಿಂಗ್ಸ್ ಕಟ್ಟಲಾಗಿದೆ. ಸಮಾವೇಶದ ವೇದಿಕೆಯ ಮುಂದೆ ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ ಅವರ ಕಟೌಟ್ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT