ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿಯಲ್ಲಿ ಹಣ ಹಂಚಿಕೆ ಪ್ರಕರಣ: ಪಿಎಸ್‌ಐ ಅಮಾನತಿಗೆ ಡಿ.ಕೆ ಶಿವಕುಮಾರ್‌ ಆಗ್ರಹ

Last Updated 15 ಏಪ್ರಿಲ್ 2021, 12:30 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು ಜಿಲ್ಲೆ): ‘ಮಸ್ಕಿ ವಿಧಾನಸಭೆಕ್ಷೇತ್ರದ ಮಟ್ಟೂರು ಗ್ರಾಮದಲ್ಲಿ ಎರಡು ಚೀಲಗಳಲ್ಲಿ ಹಣ ತಂದು ಮತದಾರರಿಗೆ ಹಂಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುದಗಲ್ ಠಾಣೆಯ ಪಿಎಸ್‌ಐ ಡಾಕೇಶ ಅವರನ್ನು ಕೂಡಲೇ ಅಮಾನತು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಒತ್ತಾಯಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಣ ಹಂಚುತ್ತಿದ್ದ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಿಡಿದಿದ್ದಾರೆ. ಆದರೆ, ಅಲ್ಲಿದ್ದ ಸಬ್ ಇನ್‌ಸ್ಪೆಕ್ಟರ್ ಡಾಕೇಶ ಒಂದು ಚೀಲ ಹಣವನ್ನು ಬಿಜೆಪಿ ಕಾರ್ಯಕರ್ತರ ಜೊತೆ ವಾಪಾಸು ಕಳಿಸಿದ್ದಾರೆ. ಮತ್ತೊಂದು ಚೀಲ ಹಣವನ್ನು ಚುನಾವಣಾಧಿಕಾರಿ ತೆಗೆದುಕೊಂಡು ಬಂದಿದ್ದಾರೆ. ಈ ಬಗ್ಗೆ ನಮ್ಮ ಕಾರ್ಯಕರ್ತ ವಿಡಿಯೊ ಮಾಡಿದ್ದನ್ನು, ಬೆದರಿಸಿ ಡಿಲೀಟ್ ಮಾಡುವ ಮೂಲಕ ಸಾಕ್ಷಿ ನಾಶಪಡಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದರು.

ಈ ಬಗ್ಗೆ ಚುನಾವಣಾಧಿಕಾರಿಗೆ ದೂರು ನೀಡುತ್ತೇವೆ. ಕ್ರಮ ಕೈಗೊಳ್ಳದಿದ್ದಾರೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT